ರಾಜ್ಯಪಾಲರ ವಿರುದ್ಧ ಶಾಸಕ ಎಚ್ ಕೆ ಪಾಟೀಲ ಆಕ್ರೋಶ
ವಿಜಯಪುರ 27: ಬಿಜೆಪಿಗೆ ಸಕರ್ಾರ ರಚಿಸುವ ಅವಕಾಶ ನೀಡುವ ಮೂಲಕ ರಾಜ್ಯಪಾಲ ವಜೂಭಾಯಿ ವಾಲಾ ಅವರು ಸಂವಿಧಾನಕ್ಕೆ ಅಪಚಾರ ಎಸಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಎಚ್ ಕೆ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರಿಗೆ ಇದು ನೋವು ಉಂಟು ಮಾಡಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮನ್ನು ಬೆಂಬಲಿಸುವ 111 ಶಾಸಕರ ಪಟ್ಟಿಯನ್ನು ಹಾಜರು ಪಡಿಸಿಲ್ಲ. ರಾಜ್ಯಪಾಲರು ಎಲ್ಲರಿಗೂ ಕಾಣುವಂತೆ ಸಂವಿಧಾನದ ನಿಯಮ ಉಲ್ಲಂಘಿಸಿದ್ದು, ಇದು ದೇಶದ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಪಕ್ಷದಿಂದ ಸಕರ್ಾರ ರಚಿಸಲು ಹಕ್ಕು ಮಂಡಿಸಿರಲಿಲ್ಲ. ಆದರೂ, ರಾಜ್ಯಪಾಲರು ಯಾಕೆ ತರಾತುರಿ ಮಾಡಿದ್ದಾರೆ? ಎಂದು ಪ್ರಶ್ನಿಸಿರುವ ಅವರು, ರಾಜ್ಯಪಾಲರು ತಮ್ಮ ನಿಧರ್ಾರದ ಬಗ್ಗೆ ರಾಜ್ಯದ ಜನರಿಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು. ಸೋಮವಾರ ವಿಶ್ವಾಸಮತವಿದೆ. ನಮ್ಮ ಕೆಲ ಶಾಸಕರು ಮೋಸ ಮಾಡಿ ಹೋಗಿದ್ದಾರೆ. ಅವರನ್ನು ಆದಷ್ಟು ಬೇಗ ಸ್ಪೀಕರ್ ಅನರ್ಹಗೊಳಿಸಬೇಕು. ಈಗಾಗಲೇ ಈ ವಿಷಯದಲ್ಲಿ ವಿಳಂಬವಾಗಿದೆ ಎಂದು ಪಾಟೀಲ್ ಅಭಿಪ್ರಾಯ ಪಟ್ಟರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 