ವಕೀಲ ಸಂತೋಷ ಪಾಟೀಲ ಅಪಹರಣ
Lawyer Santosh Patil kidnapped
ರಾಯಬಾಗ 09: ತಾಲೂಕಿನ ಸವಸುದ್ದಿ ಗ್ರಾಮದ ವಕೀಲ ಸಂತೋಷ ಅಶೋಕ ಪಾಟೀಲ ಇವರನ್ನು ಏ.29 ರಂದು ಮುಂ.10.30ರ ಸುಮಾರಿಗೆ ರಾಯಬಾಗ ನ್ಯಾಯಾಲಯಕ್ಕೆ ಬೈಕ್ ಮೇಲೆ ಹೋಗುವಾಗ ರಾಯಬಾಗ-ಕಂಕಣವಾಡಿ ರಸ್ತೆಯ ಶಾಹುಪಾರ್ಕ ಗ್ರಾಮ ಹದ್ದಿಯ ಬಸ್ ನಿಲ್ದಾಣ ಹತ್ತಿರ ಅಪಹರಣ ಮಾಡಿರುವದಾಗಿ ಆತನ ಪತ್ನಿ ರೇಖಾ ಪಾಟೀಲ ರಾಯಬಾಗ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪಹರಣಕ್ಕೊಳಗಾದ ಸಂತೋಷ ಪಾಟೀಲ ಅವರು 33 ವಯಸ್ಸಿನವರಾಗಿದ್ದು, 5ಫೂಟ್ 6ಇಂಚ್ ಎತ್ತರವಿದ್ದು, ಸದೃಢ ಮೈಕಟ್ಟು, ಗೋದಿ ಮೈಬಣ್ಣ, ದುಂಡು ಮುಖ ಹೊಂದಿರುವ ಇವರು ಕನ್ನಡ ಭಾಷೆ ಮಾತನಾಡುತ್ತಾರೆ.
ಇವರು ಬಿಳಿ ಬಣ್ಣದ ಶರ್ಟ, ಕಪ್ಪು ಚೆಕ್ಸ್ ಪ್ಯಾಂಟ್ ಧರಿಸಿದ್ದು, ಇವರ ಬಗ್ಗೆ ಯಾರಿಗಾದರೂ ಸುಳಿವು ಸಿಕ್ಕಲ್ಲಿ, ರಾಯಬಾಗ ಪೊಲೀಸ ಠಾಣೆ ದೂರವಾಣಿ ಸಂಖ್ಯೆ: 08331-225333, 9480804060ಗೆ ಸಂಪರ್ಕಿಸಲು ಕೋರಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 