ತಳ್ಳು ಗಾಡಿ ಮೂಲಕ ಅರ್ಹ ಬಡ ಕುಟುಂಬಳಿಗೆ ಆಹಾರ ಧಾನ್ಯ ವಿತರಿಸಿದ ಶಾಸಕಿ ಸೌಮ್ಯ ರೆಡ್ಡಿ
ಬೆಂಗಳೂರು, ಏ 17,ಕೋರೊನಾ ವೈರಸ್ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ೨ನೇ ಹಂತದ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಭೈರಸಂದ್ರ ವಾರ್ಡ್ನಲ್ಲಿ ನಿರ್ಗತಿಕರಿಗೆ ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಸೌಮ್ಯರೆಡ್ಡಿ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು.ಈಗಾಗಲೇ ಒಮ್ಮೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗಿದ್ದು, ೨ನೇ ಬಾರಿಗೆ ತಳ್ಳು ಗಾಡಿಗಳ ಮೂಲಕ ಆಹಾರ ಧಾನ್ಯಗಳ ಕಿಟ್ಗಳನ್ನು ಕೊಂಡೊಯ್ದು ಅರ್ಹ ಕುಟುಂಬಗಳಿಗೆ ನೀಡಿದರು.೧೦ ಕೆಜಿ ಅಕ್ಕಿ, ಬೇಳೆ, ಸಕ್ಕರೆ, ಸಾಂಬಾರುಪುಡಿ, ಉಪ್ಪು, ಮುತ್ತಿತರ ದಿನನಿತ್ಯ ಅಗತ್ಯದ ವಸ್ತುಗಳನ್ನು ವಿತರಣೆ ಮಾಡಲಾಯಿತು. ಸುಮಾರು ೩ ಸಾವಿರ ಆಹಾರ ಕಿಟ್ಗಳನ್ನು ವಿತರಿಸಲಾಗಿದೆ. ಶಾಸಕಿ ಸೌಮ್ಯ ರೆಡ್ಡಿ ತಳ್ಳು ಗಾಡಿ ತೆಗೆದುಕೊಂಡು ಆಹಾರ ಕಿಟ್ ಗಳನ್ನು ಹಂಚಿ ಗಮನ ಸೆಳೆದರು. ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಸದಸ್ಯ ಎಂ.ನಾಗರಾಜು ತಿಲಕ್ನಗರ, ಸ್ವಾಗತ್ ಚಿತ್ರಮಂದಿರ ಬಡಾವಣೆ, ಎಂ.ಎಸ್.ಬಿಲ್ಡಿಂಗ್, ಆಂಜನೇಯಸ್ವಾಮಿ ದೇವಸ್ಥಾನ, ಕಾವೇರಿ ಕೊಳಚೆ ಪ್ರದೇಶದ ಬಡ ಕುಟುಂಬಗಳಿಗೆ ವಿತರಣೆ ಮಾಡಲಾಗಿದೆ. ಮುಂದಿನ ೨-೩ ದಿನಗಳ ಕಾಲ ಮತ್ತಷ್ಟು ಪ್ರದೇಶಗಳ ಬಡವರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವುದಾಗಿ ತಿಳಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 