ಲಕ್ಷ್ಮೀ ಸಹಕಾರಿ ಬ್ಯಾಂಕ್ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಲೋಕದರ್ಶನವರದಿ
ಗುಳೇದಗುಡ್ಡ28: ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘ ಲಕ್ಷ್ಮೀ ಸಹಕಾರಿ ಬ್ಯಾಂಕಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಸತತ ಆರನೇ ಬಾರಿಗೆ ಮಾಜಿ ಶಾಸಕ ರಾಜಶೇಖರ ಶೀಲವಂತ ಅವರು ಅಧ್ಯಕ್ಷರಾಗಿ, ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಕಮಲಕಿಶೋರ ಮಾಲಪಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಬೆಳಿಗ್ಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜಶೇಖರ ಶೀಲವಂತ, ಉಪಾಧ್ಯಕ್ಷ ಸ್ಥಾನಕ್ಕೆ ಕಮಲು ಮಾಲಪಾಣಿ ನಾಮಪತ್ರ ಸಲ್ಲಿಸಿದ್ದರು, ಯಾವ ನಾಮಪತ್ರಗಳು ಸಲ್ಲಿಕೆಯಾಗದಿರುವದರಿಂದ ಅಧ್ಯಕ್ಷರಾಗಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಉಪಾಧ್ಯಕ್ಷರಾಗಿ ಕಮಲು ಮಾಲಪಾಣಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ, ತಹಸೀಲ್ದಾರ ಜಿ.ಎಂ.ಕುಲಕಣರ್ಿ ತಿಳಿಸಿದ್ದಾರೆ.
ವಿಜಯೋತ್ಸವ: ಪಟ್ಟಣದ ಲಕ್ಷ್ಮೀ ಸಹಕಾರಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಸತತ ಆರನೇ ಬಾರಿಗೆ ಮಾಜಿ ಶಾಸಕ ರಾಜಶೇಖರ ಶೀಲವಂತ ಅವರು ಅಧ್ಯಕ್ಷರಾಗಿ, ಎರಡನೇ ಬಾರಿಗೆ ಉಪಾಧ್ಯಕ್ಷರಾಗಿ ಕಮಲಕಿಶೋರ ಮಾಲಪಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಕ್ಕೆ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾಜಿ ಚೇರಮನ್ ಸಂಪತ್ಕುಮಾರ ರಾಠಿ, ವೀರಣ್ಣ ಕುರಹಟ್ಟಿ, ಸಂಜಯ ಕಾರಕೂನ, ಸಂಗಣ್ಣ ಹುನಗುಂದ, ಮೃತ್ಯುಂಜಯ ಕರನಂದಿ, ಸಂಗಪ್ಪ ಆಲೂರ, ದೀಪಕ ನೇಮದಿ, ಗಣೇಶ ಶೀಲವಂತ, ವಿಜಯಾ ಸಾವಳಗಿಮಠ, ಲಕ್ಷ್ಮೀಬಾಯಿ ರೂಡಗಿ, ರವೀಂದ್ರ ಅಲದಿ, ರಂಗಪ್ಪ ಶೇಬಿನಕಟ್ಟಿ, ಶ್ರೀಕಾಂತ ಭಾವಿ, ಸಿದ್ದು ಅರಕಾಲಚಿಟ್ಟಿ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 