ಸ್ಥಳೀಯ ಚುನಾವಣೆಗೆ ನಾಯಕರು ಪಕ್ಷದ ಸಂಘಟನೆಗೆ ಶ್ರಮಿಸಬೇಕು
Leaders should work hard to organize the party for local elections
ಹಾವೇರಿ 17: ಜಿಲ್ಲೆಯಲ್ಲಿ ಎಲ್ಲಾ ಸ್ಥಳೀಯ ಚುನಾವಣೆ ಎದುರಿಸಲು ಎಲ್ಲಾ ಗ್ರಾಮ-ತಾಲ್ಲೂಕ ಸಮಿತಿಗಳನ್ನು ರಚನೆಮಾಡಲಾಗುತ್ತಿದ್ದು, ಜವಾಬ್ದಾರಿ ತೆಗೆದುಕೊಂಡ ನಾಯಕರು ಪಕ್ಷ ಸಂಘಟನೆ ಮಾಡಲು ಶ್ರಮಿಸಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ಹಾವೇರಿ ಜಿಲ್ಲಾಧ್ಯಕ್ಷರಾದ ಅಶೋಕ ಮರೆಣ್ಣನವರ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಆಲ್ಇಂಡಿಯಾ ಬಹುಜನ ಸಮಾಜ ಪಕ್ಷದಜಿಲ್ಲಾ ಮಟ್ಟದ ಸಭೆಯಲ್ಲಿ ಪದಾಧಿಕಾರಿಗಳ ನೇಮಕ ಮಾಡಿ ಅವರಿಗೆ ಶುಭಕೋರಿ ಮಾತನಾಡಿದರು.
ಇದೇ ಅವಧಿಯಲ್ಲಿ ರಾಣೇಬೆನ್ನೂರ ತಾಲ್ಲೂಕಾಧ್ಯಕ್ಷರಾಗಿ ಜಿ.ಕೆ. ಗಣೇಶ, ಹಿರೇಕೆರೂರ ತಾಲ್ಲೂಕಾಧ್ಯಕ್ಷರಾಗಿ ಲೋಹಿತ ಓಲೇಕಾರ ಅವರನ್ನು ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಶಂಭುಲಿಂಗಯ್ಯ ಹನಗೋಡಿಮಠ, ರಾಜಪ್ಪ ಉಪ್ಪಾರ, ವಿಜಯಕುಮಾರ ಬೇನಕನವಾರಿ, ಲಿಯಾಕತ್ ತಿಳವಳ್ಳಿ, ಮೋಹಿನ್ ಮುಲ್ಲಾ, ಎಸ್.ಎಂ.ಗಣಜೂರ, ಎಂ.ಕೆ.ಮಖಬೂಲ್, ಇಶಾಕ ಕಾಗಿನೆಲೆ, ಅಜೀಮಸಾಬ ಮನ್ನಂಗಿ, ಗುಡ್ಡಪ್ಪ ಚಿಕ್ಕಪ್ಪನವರ, ದಾದಾಪೀರ ಮತ್ತಿಹಳ್ಳಿ,ಬಿ.ಸಿ.ಲಂಬಿ ಸೇರಿದಂತೆ ಪಕ್ಷದ ಮುಖಂಡರು ಮತ್ತುಕಾರ್ಯಕರ್ತರು ಪಾಲ್ಗೊಂಡಿದ್ದರು.
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ 