9 ವಿವಿಗಳನ್ನು ಮುಚ್ಚುವ ನಿರ್ಧಾರ ಕೈ ಬಿಡಿ
Leave the decision to close 9 universities
ಬೀಳಗಿ 07: ಬಾಗಲಕೋಟೆ ಸೇರಿ ರಾಜ್ಯದ 09 ವಿವಿಗಳನ್ನು ಆರ್ಥಿಕ ಹೊರೆ ಮೂಲಭೂತ ಸೌಕರ್ಯ ಹಾಗೂ ಬೋಧಕರ ಸಿಬ್ಬಂದಿ ಕೊರತೆ ಮತ್ತು ವಿದ್ಯಾರ್ಥಿಗಳ ದಾಖಲಾತಿ ಕೊರತೆ ಸೇರಿ ಅನೇಕ ಕಾರಣಗಳನ್ನು ನೀಡಿ ವಿ.ವಿ.ಗಳನ್ನ ಸರ್ಕಾರ ಮುಚ್ಚುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಸದನದಲ್ಲಿ ವಿ.ಪ. ಸದಸ್ಯ ಹನಮಂತ ನಿರಾಣಿ ಒತ್ತಾಯಿಸಿದ್ದಾರೆ.
ವಿ.ವಿಗಳನ್ನು ಮುಚ್ಚವುದರಿಂದ ಬಡ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಲ್ಲದೇ ಪ್ರಾದೇಶಿಕವಾಗಿಯೂ ಸಹ ಆಯಾ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಮಾರಕವಾಗುವುದರ ಜೊತೆಗೆ ರೈತಾಪಿ ಹಿಂದುಳಿದ ವರ್ಗದ ಮಕ್ಕಳ ಉನ್ನತ ಶಿಕ್ಷಣ ಪಡೆಯುವ ಕನಸು ಗಗನಕುಸುಮವಾಗಲಿದೆ ಹಾಗೂ ಬಡ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ರಾಜ್ಯ ಸರ್ಕಾರವೇ ಕಸಿದುಕೊಂಡಂತಾಗುತ್ತದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಾರೆ. 2021-22ರಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ವಿವಿಗಳ ಅವಶ್ಯಕತೆಗೆ ಹಾಗೂ ಅದರ ಬಗ್ಗೆ, ಚರ್ಚಿಸಿದ ನಂತರ ಅಂದಿನ ಉನ್ನತ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದ್ದಾರೆ.
ವಿವಿಗಳ ಅಭಿವೃದ್ಧಿಗಾಗಿ ಆಯವ್ಯಯದಲ್ಲಿ ಕೂಡ ಅನುದಾನ ಹಂಚಿಕೆ ಮಾಡಲಾಗಿತ್ತು. ಇಲ್ಲಿವರೆಗೂ ಯಾವುದೇ ಅನುದಾನ ಮಂಜೂರಾಗದೇ ಇರುವುದು ದುರದೃಷ್ಟಕರ ಸಂಗತಿಯಾಗಿದೆ. ರಾಜ್ಯ ಸರ್ಕಾರವು ವಿ.ವಿ ಮುಚ್ಚುವ ನಿರ್ಧಾರವನ್ನು ಕೈ ಬಿಟ್ಟು, ವಿವಿಗಳ ಶ್ರೇಯೋಭಿವೃದ್ಧಿಗೆ ರಾಜಕೀಯ ಮಾಡದೇ ಮುಂಬರುವ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಿ ಶಿಕ್ಷಣ ಕ್ಷೇತ್ರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರವು ಮುಂದಾಗಬೇಕು. ಪ್ರತಿ ಜಿಲ್ಲೆಗೊಂದು ವಿವಿ ಆಗಬೇಕೆನ್ನುವುದು ಹೊಸ ಶಿಕ್ಷಣ ನೀತಿಯ ಆಶಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವರನ್ನು ಶೂನ್ಯ ವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 