ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸ
ಲೋಕದರ್ಶನ ವರದಿ
ಬೆಳಗಾವಿ 04: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ 2019-2020ರ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ 'ವಾರ್ಷಿಕ ವಿಶೇಷ ಶಿಬಿರದ' ದತ್ತು ಗ್ರಾಮವಾದ ಮುಚ್ಚಂಡಿಯಲ್ಲಿ ದಿ. 01 ರಂದು ಎರಡನೇಯ ದಿನ ಪರಿಸರ ಸಂರಕ್ಷಣೆ ಎಂಬ ವಿಷಯ ಮೇಲೆ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆರ್.ಎಲ್.ಎಸ್. ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ. ಎಸ್.ಬಿ. ತಾರದಾಳೆ ಮಾತನಾಡುತ್ತ, ಪರಿಸರದ ಮಹತ್ವ ಮತ್ತು ಉಪಯೋಗದ ಬಗ್ಗೆ ತಿಳಿಸಿದರು. ಪರಿಸರ ಕಾಪಾಡಿದರೆ ಮಾನವನು ಬದುಕಲು ಸಾಧ್ಯವಾಗುತ್ತದೆ ಇಲ್ಲದಿದ್ದರೆ ಇಡೀ ಜೀವಸಂಕುಲ ನಾಶವಾಗುತ್ತದೆ. ಪ್ರತಿದಿನ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಯ ಅವಿಭಾಜ್ಯ ಅಂಗವಾಗಬೇಕು. ನಮಗಾಗಿ ಹಾಗೂ ಇತರರ ಆರೋಗ್ಯಕ್ಕಾಗಿ ಒಳ್ಳೇಯ ಪರಿಸರ ಅತ್ಯವಶ್ಯ. ಇಂದಿನ ಜಾಗತೀಕ ತಾಪಮಾನ ವೈಪರಿತ್ಯದಲ್ಲಿ ಯುವ ಜನತೆ ಮರ-ಗಿಡಗಳನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಗ್ರಾಮದ ಹಿರಿಯರಾದ ಶ್ರೀ. ವೀರಬಧ್ರ ಅಷ್ಟಗಿ ಅವರು ಶಿಬಿರಾರ್ಥಿಗಳು ಸೇವಾಮನೋಭಾವನೆಯನ್ನು ಇಟ್ಟುಕೊಂಡ ಸದೃಡ ಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದರು.
ಶಿಬಿರದ ಶಿಬಿರಾಧಿಕಾರಿಯಾದ ಪ್ರೊ. ಎಸ್.ಎಸ್. ಅಬ್ಬಾಯಿ ಹಾಗೂ ಶ್ರೀ. ದತ್ತರಾಮ ಚೌಗುಲೆ ಹಾಗೂ ಇತರರು ಉಪಸ್ಥಿತರಿದ್ದರು. ಪೂಜಾ ಆನಿಕಿವಿ ಹಾಗೂ ತಂಡದವರು ಎನ್.ಎಸ್.ಎಸ್. ಗೀತೆಯನ್ನು ಹಾಡಿದರು. ಕುಮಾರಿ. ಕೀರ್ತಿ ಬಸೆಟ್ಟಿ ವಂದಿಸಿದರು ಕುಮಾರಿ ಸ್ನೇಹಲ್ ಕಾರ್ಯಕ್ರಮ ನಿರೂಪಿಸಿದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 