ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು: ಐಹೊಳೆ
Lecturers should provide good education to students: Aihole
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಬೇಕು: ಐಹೊಳೆ
ರಾಯಬಾಗ 02: ಉಪನ್ಯಾಸಕರು ವಿದ್ಯಾರ್ಥಿಗಳಲ್ಲಿ ಯಾವದೇ ಭೇದಭಾವ ಮಾಡದೇ ಎಲ್ಲ ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ನೀಡಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.ಮಂಗಳವಾರ ತಾಲೂಕಿನ ಮೇಖಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೇಖಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆ ಮತ್ತು ಆದರ್ಶ ವಿದ್ಯಾಲಯ (ಪ್ರೌಢ ಶಾಲೆ) ಇರುವುದರಿಂದ ಇಲ್ಲಿನ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಪಡೆಯಲು ಅನುಕೂಲವಾಗಲು ಸರ್ಕಾರ ಆದರ್ಶ ವಿದ್ಯಾಲಯದಲ್ಲಿ ಪದವಿಪೂರ್ವ ಕಾಲೇಜ ಪ್ರಾರಂಭಿಸಿದ್ದು, ಇಲ್ಲಿನ ವಿದ್ಯಾರ್ಥಿಗಳು, ಮುಖ್ಯವಾಗಿ ಹೆಣ್ಣು ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಹೊಂದಬೇಕೆಂದರು.ವಿದ್ಯಾರ್ಥಿಗಳು ಗುರುವಿನಲ್ಲಿ ಅಚಲ ವಿಶ್ವಾಸ ಇಟ್ಟು ಶ್ರಮ ವಹಿಸದರೆ, ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ. ವಿದ್ಯಾರ್ಥಿಗಳು ನೈತಿಕ ಶಿಕ್ಷಣ ಅಳವಡಿಸಿಕೊಂಡು, ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಹೊಂದಬೇಕು ಎಂದು ಕರೆ ನೀಡಿದರು.ಪ್ರಾಚಾರ್ಯ ಬಿ.ಎಮ್.ಹಾದಿಮನಿ, ಎಸ್.ಡಿ.ಎಮ್.ಸಿ ಅಧ್ಯಕ್ಷ ಸಂಜೀವ ನಾಯಿಕ, ಪಿಡಿಒ ನೂರಅಹ್ಮದ ಕುಡಚಿ, ಸದಾಶಿವ ಘೋರೆ್ಡ, ಸಂಜು ಒಡೆಯರ, ಪಿ.ಎ.ನಾಯಿಕ, ವಿವೇಕ ಹಟ್ಟಿಕರ, ಬಸವರಾಜ ಖಿಚಡೆ, ರಾಜು ನಾಯಿಕ, ಚಿದಾನಂದ ಚೌಗಲಾ, ಚಂದ್ರಕಾಂತ ಒಡೆಯರ, ಬಸವರಾಜ ನಾಯಿಕ, ಸುಶ್ಮಿತಾ ಕಾಂಬಳೆ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.ಫೋಟೊ: 02 ರಾಯಬಾಗ 2ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಮೇಖಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಶಾಸಕ ಡಿ.ಎಮ್.ಐಹೊಳೆ ಉದ್ಘಾಟಿಸಿದರು. ಫೋಟೊ: 02 ರಾಯಬಾಗ 2ಎಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಮೇಖಳಿ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಆದರ್ಶ ಸರ್ಕಾರಿ ಪದವಿಪೂರ್ವ ಕಾಲೇಜನ್ನು ಶಾಸಕ ಡಿ.ಎಮ್.ಐಹೊಳೆ ಉದ್ಘಾಟಿಸಿ ಮಾತನಾಡುತ್ತಿರುವುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 