ಕಾನೂನು ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯ: ಅರವಿಂದ ಹಗೆದ

ಕಾನೂನು ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯ: ಅರವಿಂದ ಹಗೆದ  Legal knowledge is necessary for everyone: Aravind Hageda

ರಾಯಬಾಗ 30 : ಪಟ್ಟಣದ ಎಸ್‌.ಪಿ.ಎಂ. ಕಾನೂನು ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಬೆಂಗಳೂರು ಹೈಕೋರ್ಟ್‌ ವಕೀಲ ಅರವಿಂದ ಹಗೆದ ಮಾತನಾಡಿ, ಇಂದಿನ ವೈಜ್ಞಾನಿಕ ಯುಗದಲ್ಲಿ ಪ್ರತಿಯೊಬ್ಬರೂ ಕಾನೂನಿನ ಜ್ಞಾನ ಹೊಂದಿರುವುದು ಅತ್ಯಗತ್ಯ ಎಂದು ಹೇಳಿದರು.  

ಕಾನೂನು ಶಿಕ್ಷಣ ಪಡೆದವರಿಗೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳಿದ್ದು, ಎಸ್‌.ಪಿ.ಎಂ. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಾಧನೆಯ ಮೂಲಕ ಸಂಸ್ಥೆಯ ಹೆಸರನ್ನು ಎತ್ತಿಹಿಡಿದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆ ಅಧ್ಯಕ್ಷ ಅಮರಸಿಂಹ ಪಾಟೀಲ ವಹಿಸಿದ್ದರು. ಕಾರ್ಯದರ್ಶಿ ಶಶಿಕಲಾ ಶಿಂಗಾಡಿ, ಪ್ರಾಚಾರ್ಯ ಪ್ರೊ. ಸವಿತಾ ಕುರಬೆಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.