ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ವಿಶೇಷ ಪ್ರಯತ್ನ ಸದಲಗಾ ಪಟ್ಟಣದಲ್ಲಿ ನಿರ್ಮಾಣವಾದ ಹೈಟಿಕ ಕೇಂದ್ರೀಯ ವಿದ್ಯಾಲಯ ಶೀಘ್ರದಲ್ಲಿ ಉದ್ಘಾಟನೆ

Legislative Council Member Prakash Hukkeri's special effort Haitika Kendriya Vidyalaya built in Sa

ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ವಿಶೇಷ ಪ್ರಯತ್ನ 

ಸದಲಗಾ ಪಟ್ಟಣದಲ್ಲಿ ನಿರ್ಮಾಣವಾದ ಹೈಟಿಕ ಕೇಂದ್ರೀಯ ವಿದ್ಯಾಲಯ ಶೀಘ್ರದಲ್ಲಿ ಉದ್ಘಾಟನೆ 


ಚಿಕ್ಕೋಡಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮಹತ್ವಾಕಾಂಕ್ಷೆಯೊಂದಿಗೆ, ತಾಲೂಕಿನ ಸದಲಗಾ ಪಟ್ಟಣದಲ್ಲಿ ಸ್ಥಾಪನೆಯಾಗಿರುವ ಕೇಂದ್ರೀಯ ವಿದ್ಯಾಲಯ ಈಗ ನೂತನ ಕಟ್ಟಡದಲ್ಲಿ ಕಾರ್ಯಾರಂಭಕ್ಕೆ ಸಜ್ಜಾಗಿದೆ. 

 ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಅವರ ವಿಶೇಷ ಪ್ರಯತ್ನದಿಂದ ಮಂಜೂರಾದ ಕೇಂದ್ರೀಯ ವಿದ್ಯಾಲಯ ಶೈಕ್ಷಣಿಕ ವರ್ಷದಿಂದ ನೂತನ ಕಟ್ಟಡದಲ್ಲಿ ತರಗತಿಗಳನ್ನು ಆರಂಭಿಸುತ್ತಿದ್ದು, ಇದು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೊಸ ದಿಕ್ಕು ತೋರಲಿದೆ. ಸುಮಾರು 27.20 ಕೋಟಿ ರೂ ವೆಚ್ಚದಲ್ಲಿ, ಎಂಟು ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಈ ಕಟ್ಟಡವು ತಾಂತ್ರಿಕವಾಗಿ ಸುಸಜ್ಜಿತವಾಗಿದ್ದು, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಿದೆ. 

ಮೂರು ಅಂತಸ್ತಿನ ನೂತನ ಕಟ್ಟಡವು ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧುನಿಕ ಮತ್ತು ಗುಣಮಟ್ಟದ ಶಿಕ್ಷಣ ಒದಗಿಸಲು ಸಮರ​‍್ಿತವಾಗಿದೆ. ಇಲ್ಲಿ 20 ಹೈಟೆಕ್ ತರಗತಿಗಳ ಕೊಠಡಿಗಳು ಸ್ಥಾಪಿಸಲಾಗಿದ್ದು, ಪ್ರತ್ಯೇಕ ವಿಜ್ಞಾನ, ಗಣಿತ ಮತ್ತು ಸಾಮಾಜಿಕ ವಿಜ್ಞಾನಗಳ ಪ್ರಯೋಗಾಲಯಗಳು ಲಭ್ಯವಿವೆ. ಜೊತೆಗೆ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಆರ್ಟ್‌ ರೂಮ್ ಮತ್ತು ಇ-ಕ್ಲಾಸ್ ಸೌಲಭ್ಯಗಳೊಂದಿಗೆ ಈ ಶಾಲೆಯು ತಾಂತ್ರಿಕವಾಗಿ ಸಂಪೂರ್ಣವಾಗಿ ಸುಧಾರಿತವಾಗಿದೆ. ವಿದ್ಯಾರ್ಥಿಗಳ ಶಾರೀರಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಉತ್ತಮ ಕ್ರೀಡಾ ಮೈದಾನ, ಮಕ್ಕಳ ಪಾರ್ಕ್‌ ನಿರ್ಮಿಸಲಾಗಿದೆ. ಶಿಕ್ಷಕರಿಗಾಗಿ ವಸತಿ ಸೌಲಭ್ಯಗಳನ್ನೂ ಒದಗಿಸಲಾಗಿದೆ.  

ಸದ್ಯ ಸದಲಗಾ ಕೇಂದ್ರೀಯ ವಿದ್ಯಾಲಯದಲ್ಲಿ ಪ್ರಥಮ ತರಗತಿಯಿಂದ ಒಂಬತ್ತನೇ  ತರಗತಿಯವರೆಗೆ ಒಟ್ಟು 262 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ಒಟ್ಟು 24 ಶಿಕ್ಷಕರ ತಂಡ ಕಾರ್ಯನಿರ್ವಹಿಸುತ್ತಿದ್ದು, ಅವರು ಆಂಧ್ರ ಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ದೆಹಲಿಯಿಂದ ಆಯ್ಕೆಯಾದ, ಉನ್ನತ ಶಿಕ್ಷಣ ಪಡೆದ ಅನುಭವಿ ಶಿಕ್ಷಕರಾಗಿದ್ದಾರೆ. ಚಿಕ್ಕೋಡಿ ಮತ್ತು ಸದಲಗಾ ಪಟ್ಟಣದಲ್ಲಿ ಒಂದೇ ತಾಲೂಕಿನಲ್ಲಿ ಎರಡು ಕೇಂದ್ರೀಯ ವಿದ್ಯಾಲಯ ಇರುವುದು ವಿಶೇಷವಾಗಿದೆ. 

"ನಮ್ಮ ಗ್ರಾಮೀಣ ಭಾಗದ ಮಕ್ಕಳು ನಗರದಂತೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು ಎಂಬ ಆಶಯದಿಂದ ನಾನು ಚಿಕ್ಕೋಡಿ ಮತ್ತು ಸದಲಗಾ ಪಟ್ಟಣಗಳಲ್ಲಿ 2 ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಿ ಸುಸಜ್ಜಿತ ಕಟ್ಟಡಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವುದು ನನಗೆ ಹೆಮ್ಮೆಯ ಸಂಗತಿ. ನೂತನ ಕಟ್ಟಡದಲ್ಲಿ ಈ ಶೈಕ್ಷಣಿಕ ವರ್ಷದಿಂದ ತರಗತಿಗಳು ಆರಂಭವಾಗುತ್ತಿರುವುದು ನನ್ನ ಪ್ರಯತ್ನಕ್ಕೆ ಸಾರ್ಥಕತೆ ತಂದಿದೆ. 

ಪ್ರಕಾಶ ಹುಕ್ಕೇರಿ  

ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ. 


ಇತ್ತೀಚಿನ ಸುದ್ದಿ