ಹೈದರಾಬಾದ್ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷೆ: ಸೆರೆಗೆ ಕಾರ್ಯಾಚರಣೆ ತೀವ್ರ
ಹೈದರಬಾದ್, ಮೇ14,ನಗರದ ಹೊರವಲಯದಲ್ಲಿ ಕಾಣಿಸಿಕೊಂಡ ಚಿರತೆ ಹಿಡಿಯಲು ಕಾರ್ಯಾಚರಣೆ ಮುಂದುವರೆದಿದೆ. ಗುರುವಾರ ಹೊರವಲಯದ ಮೈಲಾರ್ ದೇವ್ ಪಲ್ಲಿಯ ರಸ್ತೆಯ ಮೇಲೆ ಮಲಗಿದ್ದ ಚಿರತೆ ಕಂಡುಬಂದಿತ್ತು. ಚಿರತೆ ಕಾಲಿಗೆ ಗಾಯವಾಗಿತ್ತು. ಸುದ್ದಿ ತಿಳಿದಂತೆ ಜನರು ಚಿರತೆ ನೋಡಲು ಗುಂಪು ಸೇರಿದ್ದಾರೆ. ಗಾಬರಿಗೊಂಡ ಚಿರತೆ ಸ್ಥಳದಿಂದ ಕಾಲ್ಕಿತ್ತು ರಸ್ತೆ ದಾಟಿ ಹತ್ತಿರದ ಮದುವೆ ಮಂಟಪದಲ್ಲಿ ಸೇರಿದೆ. ರಸ್ತೆ ದಾಟುತ್ತಿದ್ದಾಗ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಿ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.ನೆಹರು ಜೈವಿಕ ಉದ್ಯಾನವನದ ಸಿಬ್ಬಂದಿಯೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರಾಣಿಗೆ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಸೆರೆ ಹಿಡಿದ ನಂತರ ಚಿರತೆಯನ್ನು ಚಿಕಿತ್ಸೆಗಾಗಿ ಪ್ರಾಣಿಸಂಗ್ರಹಾಲಯಕ್ಕೆ ಸಾಗಿಸಲಾಗುವುದು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 