ಹೈದರಾಬಾದ್ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷೆ: ಸೆರೆಗೆ ಕಾರ್ಯಾಚರಣೆ ತೀವ್ರ
ಹೈದರಬಾದ್, ಮೇ14,ನಗರದ ಹೊರವಲಯದಲ್ಲಿ ಕಾಣಿಸಿಕೊಂಡ ಚಿರತೆ ಹಿಡಿಯಲು ಕಾರ್ಯಾಚರಣೆ ಮುಂದುವರೆದಿದೆ. ಗುರುವಾರ ಹೊರವಲಯದ ಮೈಲಾರ್ ದೇವ್ ಪಲ್ಲಿಯ ರಸ್ತೆಯ ಮೇಲೆ ಮಲಗಿದ್ದ ಚಿರತೆ ಕಂಡುಬಂದಿತ್ತು. ಚಿರತೆ ಕಾಲಿಗೆ ಗಾಯವಾಗಿತ್ತು. ಸುದ್ದಿ ತಿಳಿದಂತೆ ಜನರು ಚಿರತೆ ನೋಡಲು ಗುಂಪು ಸೇರಿದ್ದಾರೆ. ಗಾಬರಿಗೊಂಡ ಚಿರತೆ ಸ್ಥಳದಿಂದ ಕಾಲ್ಕಿತ್ತು ರಸ್ತೆ ದಾಟಿ ಹತ್ತಿರದ ಮದುವೆ ಮಂಟಪದಲ್ಲಿ ಸೇರಿದೆ. ರಸ್ತೆ ದಾಟುತ್ತಿದ್ದಾಗ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆಯನ್ನು ವಾಹನ ಸಂಚಾರಕ್ಕೆ ಬಂದ್ ಮಾಡಿ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.ನೆಹರು ಜೈವಿಕ ಉದ್ಯಾನವನದ ಸಿಬ್ಬಂದಿಯೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರಾಣಿಗೆ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಸೆರೆ ಹಿಡಿದ ನಂತರ ಚಿರತೆಯನ್ನು ಚಿಕಿತ್ಸೆಗಾಗಿ ಪ್ರಾಣಿಸಂಗ್ರಹಾಲಯಕ್ಕೆ ಸಾಗಿಸಲಾಗುವುದು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 