ಪರಸ್ಪರ ಸಹಕಾರದಲ್ಲಿ ಮಂದಿರ, ಮಸೀದಿ ನಿರ್ಮಾಣವಾಗಲಿ: ಪೇಜಾವರ ಶ್ರೀ
ಉಡುಪಿ, ನ.9 : ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವೀಕರಿಸಬೇಕು. ನನಗೆ ವೈಯಕ್ತಿಕವಾಗಿಯೂ ಈ ತೀಪು ಸಮ್ಮತವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾತನಾಡಿದ ಅವರು, ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪುನಲ್ಲಿ ಹೇಳಿದ್ದಾರೆ. ಸರಕಾರವೇ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬ ತೀಪು ಬಂದಿದೆ. ಹಿಂದೂಗಳಿಗೆ ರಾಮ ಜನ್ಮಭೂಮಿಯ ಹಕ್ಕು ಮುಖ್ಯ. ಮುಸ್ಲಿಮರಿಗೆ ಮಸೀದಿಗೆ ಜಾಗ ಮುಖ್ಯ. ಈ ನಿಟ್ಟಿನಲ್ಲಿ ನ್ಯಾಯಾಲಯದ ಈ ತೀಪು ಹಿಂದೂ-ಮುಸ್ಲಿಮರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಎಂದು ಅಭಿಪ್ರಾಯಿಸಿದರು. ಹಿಂದೂ-ಮುಸ್ಲಿಮರು ಒಟ್ಟು ಸೇರಿ ಸೂಕ್ತ ಸ್ಥಳವನ್ನು ಮಸೀದಿಗೆ ಕೊಡಬೇಕು. ಅದೇರೀತಿ ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಕರಿಸಬೇಕು, ಮಂದಿರ ನಿರ್ಮಾಣ ವಿಚಾರದಲ್ಲಿ ಮುಸ್ಲಿಮರೂ ಸಹಕರಿಸಬೇಕು ಎಂದು ಪೇಜಾವರಶ್ರೀ ಹೇಳಿದರು. ವಿಜಯೋತ್ಸವ, ಮೆರವಣಿಗೆ ಬೇಡ ಎಂದು ಗುರುವಾರವೇ ಹೇಳಿದ್ದೆ. ಈಗಲೂ ಪುನರುಚ್ಚಾರ ಮಾಡುವೆ. ಮುಸ್ಲಿಮರು ಕೂಡಾ ಸವೋಚ್ಚ ನ್ಯಾಯಾಲಯದ ತೀರ್ಪನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ದೇಶದ ಎಲ್ಲರೂ ಕೋಮು ಸೌಹಾರ್ದದಿಂದ ಇರಬೇಕು ಎಂದು ಮನವಿ ಮಾಡುವೆ ಎಂದವರು ನುಡಿದರು. ನನ್ನ ಇಳಿ ವಯಸ್ಸಿನಲ್ಲಿ ಈ ತೀಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ ವೈಯಕ್ತಿಕವಾಗಿಯೂ ಸಂತೋಷವಾಗಿದೆ ಎಂದು ಪೇಜಾವರಶ್ರೀ ಹೇಳಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 