ಪರಂಪರೆಯನ್ನು ಉಳಿಸಿ ಬೆಳೆಸೋಣನಮ್ಮ ಪರಂಪರೆಯನ್ನ ಉಳಿಸಿ ಬೆಳೆಸುವ ಪ್ರಯತ್ನವನ್ನು ಮಾಡೋಣವೆಂದು :ಡಾ. ಎಸ್ .ಎಸ್ ಅಂಗಡಿ
Let's preserve and develop our heritage: Dr. S.S. Angadi
ಪರಂಪರೆಯನ್ನು ಉಳಿಸಿ ಬೆಳೆಸೋಣನಮ್ಮ ಪರಂಪರೆಯನ್ನ ಉಳಿಸಿ ಬೆಳೆಸುವ ಪ್ರಯತ್ನವನ್ನು ಮಾಡೋಣವೆಂದು :ಡಾ. ಎಸ್ .ಎಸ್ ಅಂಗಡಿ
ಧಾರವಾಡ 18 : ಕೆ.ಇ.ಬೋರ್ಡಿನ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಧಾರವಾಡ ಐಕ್ಯೂ ಎಸಿ ಮತ್ತು ಇತಿಹಾಸ ವಿಭಾಗದ ಸಹಯೋ ಯೋಗದೊಂದಿಗೆ ಇಂದು ನಡೆದ ಐತಿಹಾಸಿಕ ಪರಂಪರೆ ಉಳಿಸಿ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಹಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಧಾರವಾಡ ಇವರು ಮಾತನಾಡಿ, ನಮ್ಮ ವಿದ್ಯಾರ್ಥಿಗಳು ತಮ್ಮ ಸ್ಥಳಿಯ ಪ್ರದೇಶದಲ್ಲಿ ದೊರೆಯುವಂತಹ ಸ್ಮಾರಕಗಳನ್ನ ತಿಳಿದುಕೊಳ್ಳುವ ಮತ್ತು ಅವುಗಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಅಲ್ಲದೆ, ನಮ್ಮ ಪರಂಪರೆ ಉಳಿಸಿ ಬೆಳೆಸುವ ಪ್ರಯತ್ನವನ್ನ ಎಲ್ಲರೂ ಸೇರಿ ಮಾಡಿದಾಗ ಮಾತ್ರ ಮುಂದಿನ ಪೀಳಿಗೆಗೆ ಅವುಗಳು ದಾರೀದೀಪ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಧಾರವಾಡವು ಐತಿಹಾಸಿಕ ಮತ್ತು ಸಾಹಿತ್ಯದೃಷ್ಟಿಯಿಂದ ಮಹತ್ವದ ಸ್ಥಾನವನ್ನು ಪಡೆದುಕೊಂಡಿದ್ದು, ಇಲ್ಲಿ ದೊರೆಯುವಂತಹ ಶಾಸನಗಳು ದೇವಾಲಯಗಳು ಮೂರ್ತಿ ಶಿಲ್ಫ ಗೋಗ್ರಹಣ ಶಿಲ್ಪ, ಕೋಟೆಗಳು, ಬಾವಿಗಳು ಇನ್ನೂ ಅನೇಕ ಸ್ಮಾರಕಗಳಿದ್ದು ಅವುಗಳ ಪರಿಚಯವನ್ನು ಮಾಡಿಕೊಳ್ಳುಬೇಕು ಎಂದು ಹೇಳುತ್ತಾ ಹಲವಾರು ಉದಾಹರಣೆಗಳನ್ನು ವಿದ್ಶಾರ್ಥಿಗಳಿಗೆ ಪ್ರಾತ್ಯಕ್ಷಿಯವಾಗಿ ಮಾಹಿತಿಗಳನ್ನ ತಿಳಿಸಿಕೊಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಎಂ.ಎ. ಸಿದ್ಧಾಂತಿರವರು ಮಾತನಾಡಿ, ಸತ್ಯ ಸಂಗತಿಗಳನ್ನು ಸಾಕ್ಷಿ ಆಧಾರಗಳ ಮೂಲಕ ಸಾಬೀತು ಪಡಿಸುವುದೇ ನಿಜವಾದ ಇತಿಹಾಸ ಅಲ್ಲದೆ ಜ್ಞಾನವಿಲ್ಲದೆ ಇತಿಹಾಸವನ್ನು ತಿರುಚಬೇಡಿ ಮತ್ತು ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳ ಚರಿತ್ರೆಯನ್ನು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು. ಕೆ. ಚೆನ್ನಮ್ಮ ಹೂಗಾರ್ ಪ್ರಾರ್ಥಿಸಿದರು. ಡಾ. ಸುರೇಶ್ ಹಾನಗಲ್ ಸ್ವಾಗತಿಸಿದರು. ಅತಿಥಿಗಳ ಪರಿಚಯ ಈಶ್ವರ ರಾವ್ ಕರಾತ್, ವಂದನಾರೆ್ಣಯನ್ನು ಕೆ.ಎಸ್. ಮಡಿವಾಳರ್ ನೆರವೇರಿಸಿದರು.ಫೋಟೋ ಅಡಿಬರಹ: ಐತಿಹಾಸಿಕ ಪರಂಪರೆ ಉಳಿಸಿ ಕಾರ್ಯಕ್ರಮದಲ್ಲಿ ಭಿತ್ತಿಚಿತ್ರ ಅನಾವರಣಗೊಳಿಸಲಾಯಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 