ಬೋಸ್ರ ನಾಯಕತ್ವದ ಗುಣ ಯುವಕರಲ್ಲಿ ಬೆಳೆಯಲಿ
ಲೋಕದರ್ಶನವರದಿ
ಗುಳೇದಗುಡ್ಡ23: ದೇಶದ ಸ್ವಾತಂತ್ರ್ಯದ ಬೀಜ ಬಿತ್ತಿದವರಲ್ಲಿ ಸುಭಾಸ್ಚಂದ್ರ ಬೋಸರೂ ಒಬ್ಬರು. ಅವರ ಕ್ರಾಂತಿಯ ಗರ್ಜನೆ ಬ್ರಿಟೀಷರನ್ನು ನಿದ್ದೆ ಗೆಡಿಸುತ್ತಿದ್ದವು. ಇಂದಿನ ರಾಜಕೀಯ ಸ್ಥಿತಿಗೆ ಸುಭಾಸ್ ಚಂದ್ರಬೋಸ್ರ ಆದರ್ಶ ಗುಣಗಳು, ಕ್ರಾಂತಿಕಾರಿ ನಡುವಳಿಕೆಗಳು ಮತ್ತು ನಾಯಕತ್ವದ ಗುಣಗಳು ಯುವಕರಿಗೆ ಅವಶ್ಯವಾಗಿವೆ ಎಂದು ಪ್ರಾಚಾರ್ಯ ಎಂ.ಜಿ ಚಂದ್ರಬೋಸ್ ಹೇಳಿದರು.
ಅವರು ಗುರುವಾರ ಇಲ್ಲಿಗೆ ಸಮೀಪದ ನೀರಲಕೇರಿ ಗ್ರಾಮದ ಎಂ.ಆರ್.ಗಾಣಿಗೇರ ಪಬ್ಲಿಕ್ ಶಾಲೆಯಲ್ಲಿ ಸುಭಾಸಚಂದ್ರ ಬೋಸ್ರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿ, ನನಗೆ ರಕ್ತ ಕೊಡಿನಾನು ನಿಮಗೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂದು ಹೇಳಿದ ಸುಭಾಸಚಂದ್ರ ಬೋಸರ ಕ್ರಾಂತಿಕಾರಕ ಮಾತು ಇಂದಿಗೂ ವೀರರಲ್ಲಿ ಮನದಲ್ಲಿ ಚಿರಸ್ಥಾಯಿಯಾಗಿದೆ.ಇಂದಿನ ಯುವಕರಲ್ಲಿ ದೇಶ ಭಕ್ತಿ ಬೆಳೆಯಬೇಕು. ದೇಶ ಕಟ್ಟುವಲ್ಲಿ ಇಂತಹ ಅನೇಕ ಮಹನೀಯರು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ. ಅವರ ಸ್ಮರಣೆ ನಿಮ್ಮಲ್ಲಿ ದೇಶ ಭಕ್ತಿ ಮೂಡಿಸಲಿ ಎಂದರು.
ಭಾವಚಿತ್ರಕ್ಕೆ ಪೂಜೆ ನೆರೆವೇರಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಮಕ್ಕಳಿಂದ ಭಾಷಣ, ಛದ್ಮವೇಷ ಹಾಗೂ ರಾಷ್ಟ್ರಭಕ್ತಿಗೀತೆ ಮುಂತಾದ ಕಾರ್ಯಕ್ರಮಗಳು ಜರುಗಿದವು.
ಭಾರತಿ ರಂಗಣ್ಣವರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾಥರ್ಿಗಳು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 