ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ: ತಿವಾರಿ ಸವಾಲು
ನಾಗ್ಪುರ, ಅ 17: ವೀರ್ ಸಾವರ್ಕರ್ ಗೆ ಭಾರತ ರತ್ನ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಬಿಜೆಪಿಯ ನೀತಿ, ನಡವಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ಮನೀಷ್ ತಿವಾರಿ, ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ ಎಂದು ತಿರುಗೇಟು ನೀಡಿದ್ದಾರೆ. ಸಾವರ್ಕರ್ ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಆರೋಪವಿದೆ. ಆದರೇ ನಾಥೂರಾಮ್ ಗೋಡ್ಸೆ ಗಾಂಧೀಯನ್ನು ಗುಂಡಿಟ್ಟು ಹತ್ಯೆಮಾಡಿದ್ದ, ಈ ವರ್ಷ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆಯ ಸಮಯದಲ್ಲಿ ಎನ್ ಡಿ ಎ ಸರ್ಕಾರ ಭಾರತ ರತ್ನವನ್ನು ಸಾವರ್ಕರ್ ಬದಲಾಗಿ ಗೋಡ್ಸೆಗೆ ನೀಡಬೇಕು ಎಂದು ಅವರು ವ್ಯಂಗ್ಯವಾಡಿದ್ದಾರೆ. ಮತ್ತೊಬ್ಬ ಕಾಂಗ್ರೆಸ್ ನಾಯಕ ರಷೀದ್ ಅಲ್ವಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಈ ಬಾರಿ ಸಾವರ್ಕರ್ ಹೆಸರು ಭಾರತ ರತ್ನ ನೀಡುವವರ ಪಟ್ಟಿಯಲ್ಲಿದ್ದು ಸೇರಲಿದ್ದು ಮುಂದಿನ ಹೆಸರು ನಾಥೂರಾಮ್ ಗೋಡ್ಸೆಯದ್ದು ಎಂದು ಈಗಲೇ ಖಚಿತವಾಗಿದೆ ಎಂದು ಆರೋಪಿಸಿ ಮುಂದಿನ ಬಾರಿ ಗೊಡ್ಸೆಗೆ ಬಿಜೆಪಿ ಸರ್ಕಾರ ಭಾರತ ರತ್ನ ನೀಡುವುದರಲ್ಲಿ ಅನುಮಾನವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗೆ ಬಿಜೆಪಿ ಕಾರ್ಯದ್ಯಕ್ಷ ಜೆ.ಪಿ ನಡ್ಡಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಢ್ನವೀಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದರು. ಇದರಲ್ಲಿ ಸಾವರ್ ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಭರವಸೆ ನೀಡಲಾಗಿತ್ತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 