ಪ್ರತಿದಿನ ಯೋಗದಿಂದಲೇ ಪ್ರಾರಂಭವಾಗಲಿ: ಎನ್.ಆರ್.ಠಕ್ಕಾಯಿ
Let every day begin with yoga: N.R. Thakkai
ಬೈಲಹೊಂಗಲ, 21 : ಪ್ರತಿದಿನ ಯೋಗದಿಂದಲೇ ಆರಂಭವಾದರೆ ಜೀವನಲ್ಲಿ ನೆಮ್ಮದಿಗೆ ಕೊರತೆಯಿರುವುದಿಲ್ಲ ಎಂದು ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಗ ಮಾಡುವುದರಿಂದ ಉತ್ಸಾಹ, ಚೈತನ್ಯ, ಆಸಕ್ತಿ ಹೆಚ್ಚಾಗುವುದಲ್ಲದೇ ಉತ್ತಮ ಆರೋಗ್ಯ ಹೊಂದಬಹುದು ಎಂದು ಅವರು ಅಭಿಪ್ರಾಯಪಟ್ಟರು.
ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ಇತಿಹಾಸ ತಿಳಿಸಿಕೊಡುವುದರ ಜೊತೆಗೆ ವಜ್ರಾಸನ, ಪದ್ಮಾಸನ, ಚಕ್ರಾಸನ ಮುಂತಾದ ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು. ಯೋಗಮಂತ್ರ, ಓಂಕಾರ ಹಾಗೂ ಯೋಗ ಪ್ರತಿಜ್ಞೆ ಬೋಧಿಸಲಾಯಿತು. ವಿದ್ಯಾರ್ಥಿಗಳಾದ ಸೃಷ್ಠಿ ಹಿರೇಮಠ, ಭಾಗ್ಯಶ್ರೀ ಬಡಿಗೇರ, ವಿದ್ಯಾ ಕುಲಕರ್ಣಿ ಯೋಗದ ಉಪಯೋಗದ ಕುರಿತು ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಭೀಮಪ್ಪ ಪಾಶ್ಚಾಪೂರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾನಿಕಾ ಕುಲಕರ್ಣಿ ನಿರೂಪಿಸಿದರು. ಚೇತನಾ ಗಡಾದ ಸ್ವಾಗತಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 