ಪ್ರತಿದಿನ ಯೋಗದಿಂದಲೇ ಪ್ರಾರಂಭವಾಗಲಿ: ಎನ್.ಆರ್.ಠಕ್ಕಾಯಿ
Let every day begin with yoga: N.R. Thakkai
ಬೈಲಹೊಂಗಲ, 21 : ಪ್ರತಿದಿನ ಯೋಗದಿಂದಲೇ ಆರಂಭವಾದರೆ ಜೀವನಲ್ಲಿ ನೆಮ್ಮದಿಗೆ ಕೊರತೆಯಿರುವುದಿಲ್ಲ ಎಂದು ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಗ ಮಾಡುವುದರಿಂದ ಉತ್ಸಾಹ, ಚೈತನ್ಯ, ಆಸಕ್ತಿ ಹೆಚ್ಚಾಗುವುದಲ್ಲದೇ ಉತ್ತಮ ಆರೋಗ್ಯ ಹೊಂದಬಹುದು ಎಂದು ಅವರು ಅಭಿಪ್ರಾಯಪಟ್ಟರು.
ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ಇತಿಹಾಸ ತಿಳಿಸಿಕೊಡುವುದರ ಜೊತೆಗೆ ವಜ್ರಾಸನ, ಪದ್ಮಾಸನ, ಚಕ್ರಾಸನ ಮುಂತಾದ ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು. ಯೋಗಮಂತ್ರ, ಓಂಕಾರ ಹಾಗೂ ಯೋಗ ಪ್ರತಿಜ್ಞೆ ಬೋಧಿಸಲಾಯಿತು. ವಿದ್ಯಾರ್ಥಿಗಳಾದ ಸೃಷ್ಠಿ ಹಿರೇಮಠ, ಭಾಗ್ಯಶ್ರೀ ಬಡಿಗೇರ, ವಿದ್ಯಾ ಕುಲಕರ್ಣಿ ಯೋಗದ ಉಪಯೋಗದ ಕುರಿತು ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಭೀಮಪ್ಪ ಪಾಶ್ಚಾಪೂರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾನಿಕಾ ಕುಲಕರ್ಣಿ ನಿರೂಪಿಸಿದರು. ಚೇತನಾ ಗಡಾದ ಸ್ವಾಗತಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 