ಪೋಲಿಯೋ ಮುಕ್ತ ಭಾರತ ಕಟ್ಟಲು ಎಲ್ಲರೂ ಮುಂದಾಗಲಿ: ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಕವಿತಾ
ಲೋಕದರ್ಶನ ವರದಿ
ಗದಗ 20: ಪೊಲೀಯೊದಿಂದ ಮಕ್ಕಳನ್ನು ರಕ್ಷಿಸಲು, ಪೊಲೀಯೋ ಮುಕ್ತ ಭಾರತ ಕಟ್ಟಲು ಪಾಲಕರು ಮುಂದಾಗಬೇಕೆಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಹೇಳಿದರು.
ಗಂಗಾಪೂರಪೇಟೆಯ ದುರ್ಗಾದೇವಿ ಶಿಕ್ಷಣ ಸಮಿತಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕ ಆರೋಗ್ಯಾಧಿಕಾರಿಗಳ ಕಾಯರ್ಾಲಯದಿಂದ ಹಮ್ಮಿಕೊಂಡ ದುರ್ಗಾದೇವಿ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಪೊಲೀಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೊಲೀಯೋ ಹನಿ ಹಾಕಿ ಮಾತನಾಡಿ, 5 ವರ್ಷದ ಒಳಗಿನ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕುವದರಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು. ವೈದ್ಯಾಧಿಕಾರಿ ಡಾ. ಗೀತಾ ಧನಗರ, ಡಾ. ಎಸ್.ಎ.ಬಿರಾದಾರ, ನೇತ್ರಾಧಿಕಾರಿ ರುದ್ರೇಶ ಬಳಿಗಾರ, ಸುಶ್ರೂಶಕಿ ಸುಧಾ ಬೆಂತೂರ, ಶಾಲೆಯ ಮುಖ್ಯೋಪಾದ್ಯಾಯನಿ ಎಸ್.ಆರ್. ಸಂಬರಗಿಮಠ, ಶಿಕ್ಷಕಿಯರಾದ ಎಂ.ಆರ್.ಅಂಗಡಿ, ಎಂ.ಎಂ.ಹಿಡ್ಕಿಮಠ, ಎಸ್.ಬಿ. ಹರವಿ, ಎಂ.ಬಿ.ಫಣಿಬಂದ, ಪಿ.ಪಿ.ಶಿರೋಳಕರ, ಎಂ.ಎಂ.ಅಗಸಿಮನಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 