ಸರ್ಕಾರದ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪಲಿ: ಪಿಡಿ ಕರೀಂ ಅಸದಿ
Let government programs reach deserving beneficiaries: PD Karim Asadi
ಲೋಕದರ್ಶನ ವರದಿ
ಕಾರವಾರ, ಮಾ.18 :- ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜನರಿಗೆ ಅನುಕೂಲವಾಗಲೆಂದು ಅನುಷ್ಠಾನಕ್ಕೆ ತರುವ ಎಲ್ಲ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಬೇಕು ಎಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರರೀಂ ಅಸದಿ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ ವತಿಯಿಂದ ನಡೆದ ಎನ್.ಆರ್.ಎಲ್.ಎಮ್. ಕೃಷಿ ಸಖಿ ಮತ್ತು ಪಶು ಸಖಿ ಅವರಿಗಾಗಿ ಆಯೋಜಿಸಿದ್ದ ಪ್ರಗತಿ ಪರೀಶೀಲನೆ ಸಭೆ ಮತ್ತು ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಸಖಿಗಳು ಕೃಷಿ ಇಲಾಖೆಯಡಿ ಮಣ್ಣು ಪರೀಕ್ಷೆ, ಆತ್ಮ ಯೋಜನೆ, ಮಿಶ್ರ ಬೆಳೆಗಳು, ಹನಿ ನೀರಾವರಿ, ಸಾವಯವ ಕೃಷಿ, ಬೆಳೆ ವಿಮೆ, ಕೃಷಿ ಯಾಂತ್ರೀಕರಣದ ಕುರಿತು ಮಾಹಿತಿ ಪಡೆದು, ತಮಗೆ ನಿಯೋಜಿಸಿದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿಕರಿಗೆ ಮಾಹಿತಿ ನೀಡಬೇಕು. ಪಶು ಸಖಿಗಳು ಪಶುಸಂಗೋಪನೆ ಇಲಾಖೆಯಡಿ ಜಾನುವಾರು ಲಸಿಕಾ ಕಾರ್ಯಕ್ರಮ, ದೇಶಿ ತಳಿಗಳ ಅಭಿವೃದ್ಧಿಗೆ ಪ್ರೋತ್ಸಾಹ, ರಾಷ್ಟ್ರೀಯ ಗೋಕುಲ ಮಿಷನ್, ಕಾಲುಬಾಯಿ ರೋಗದ ಕುರಿತು ಜಾಗೃತಿ, ಜಾನುವಾರು ವಿಮೆ, ಮೇವು ಸೇರಿದಂತೆ ವಿವಿಧ ಮಾಹಿತಿ ಪಡೆದುಕೊಂಡು ಪಶುಪಾಲಕರಿಗೆ ಅರಿವು ಮೂಡಿಸಬೇಕು ಎಂದರು.
ಕೃಷಿ ಇಲಾಖೆಯ ಉಪ ನಿರ್ದೇಶಕಿ ಪ್ರತಿಭಾ ಹೂಗಾರ ಹಾಗೂ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ನದಾಫ್ ಕೃಷಿ ಇಲಾಖೆ ಮತ್ತು ಪಶುಸಂಗೋಪನೆ ಇಲಾಖೆಯಡಿ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎನ್.ಆರ್.ಎಲ್.ಎಮ್. ಯೋಜನೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ನಾಗರಾಜ ಕಲ್ಮನೆ ಸೇರಿದಂತೆ ಜಿಲ್ಲಾ ಸಮಾಲೋಚಕರು, ಎಲ್ಲಾ ತಾಲೂಕುಗಳ ಕೃಷಿ ಸಖಿ ಹಾಗೂ ಪಶು ಸಖಿಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 