ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಲಿ: ಡಾ. ಕೋರೆ
Let students display sportsmanship: Dr. Corey
ಮಾಂಜರಿ 25: ಗ್ರಾಮೀಣ ಭಾಗದಲ್ಲಿ ವಿದ್ಯಾಭಾಸ ಮಾಡುವ ವಿದ್ಯಾರ್ಥಿಗಳಲ್ಲಿ ಕ್ರೀಡೆಯಲ್ಲಿ ನೈಪುಣ್ಯ ಹೊಂದಿರುತ್ತಾರೆ, ಅದಕ್ಕಾಗಿ ವಿದ್ಯಾರ್ಥಿಗಳು ಆಟ ಪಾಠದ ಜೊತೆಗೆ ಕ್ರೀಡಾಸ್ಪರ್ಧೆಯಲ್ಲಿ ಸಹಭಾಗಿತ್ವ ಬೆಳೆಸಿ ತಮ್ಮ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಬೇಕು ಅದಕ್ಕಾಗಿ ಕೆಎಲ್ಇ ಶಿಕ್ಷಣ ಸಂಸ್ಥೆಯ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಕೆಎಲ್ಇ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ಪ್ರಭಾಕರ್ ಕೋರೆ ಹೇಳಿದರು.
ಅವರು ಇಂದು ಚೀಕೋಡಿ ತಾಲೂಕಿನ ಅಂಕಲಿ ಗ್ರಾಮದ ಶಿವಾಲಯದಲ್ಲಿ ಕೆಎಲ್ಇ ಶಿಕ್ಷಣ ಸಂಸ್ಥೆಯ ರಾಯಬಾಗ ತಾಲೂಕಿನ ಯಡ್ರಾವ ಗ್ರಾಮದಲ್ಲಿರುವ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ನಕುಲ ಉಮೇಶ ಕೆಂಚೆ ಚಕ್ರ ಎಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ. ಹೇಮಾ ಪ್ರಕಾಶ ಬೆಳೆಸೆ ಮತ್ತು ಕುಮಾರ ಮಲ್ಲಿನಾಥ ಕಲಶೆಟ್ಟಿ ಎತ್ತರ ಜಿಗಿತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಕಾಗಿ ಅವರನ್ನು ಸನ್ಮಾನಿಸುವಾಗ ಅವರು ಮಾತನಾಡುತ್ತಿದ್ದರು.
ರಾಯಬಾಗ್ ಶಾಸಕ ದುರ್ಯೋಧನ ಐಹೊಳೆ ಶುಭ ಕೋರಿದರು. ಇವರ ಜೊತೆಗೆ ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಮಲ್ಲಿಕಾರ್ಜುನ್ ಕೋರೆ, ಅಂಕಲಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ ಪಾಟೀಲ ಹಾಗೂ ಸ್ಥಳೀಯ ಶಾಲಾ ಸುಧಾರಣಾ ಸಮಿತಿಯ ಆಡಳಿತ ಮಂಡಳಿಯ ಅಧ್ಯಕ್ಷ ಸತ್ಯಪ್ಪ ಬಿಷ್ಠೆ ಸದಸ್ಯ ಸದಾಶಿವ ನಿಪ್ಪಾಣಿ ಅಜೀವ ಸದಸ್ಯ ಬಿ. ಎಸ್. ಅಂಬಿ ಪ್ರಧಾನ ಗುರು ಡಿ. ಬಿ. ಕಬ್ಬೂರೆ ಹಾಗೂ ದೈಹಿಕ ಶಿಕ್ಷಕ ಕುಮಾರ ಎ.ಎಸ್. ಮಗದುಮ್ಮ ಮತ್ತು ಎಸ್. ಜಿ. ಕಾಂಬಳೆ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 