ಶೋಷಿತರು ಸರಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಲಿ: ಡಾ.ನಾಗಲಕ್ಷ್ಮೀ
Let the exploited come forward to get the government scheme: Dr.Nagalakshmi
ಮಾಂಜರಿ 05: ಶೋಷಿತರು ಹೋರಾಟ ಮಾಡುವ ಮೂಲಕ ಸರಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ಅವರು ಶುಕ್ರವಾರರಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರವಾಡಿ ಗ್ರಾಮದಲ್ಲಿ ಭೀಮ ಘರ್ಜನೆ ಯುವರಾಜ ಬಣ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದಲಿತ ಹಿಂದುಳಿದ ವರ್ಗಗಳ ಅಲ್ಪ ಸಂಖ್ಯಾತರ ಜಾಗೃತಿ ಸಲಹಾ ಸಮಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಅಂಬೇಡ್ಕರ ಅವರ ಅರಿವಿನ ಬೆಳಕು ತಿಳಿಸಲು ಬಂದಿರುವೆ. ಅಂಬೇಡ್ಕರ ಮಕ್ಕಳು ಪ್ರಶ್ನೆ ಮಾಡಬೇಕು. ನಾನು ಅಂಬೇಡ್ಕರ ನಿಜವಾದ ಮಗಳಾಗಿದ್ದೇನೆ. ಮಹಿಳಾ ಗ್ರಾಮ ಸಭೆಯನ್ನು ಪ್ರತಿಯೊಂದು ಗ್ರಾಮದಲ್ಲಿ ನಡೆಸಬೇಕು ಎಂದರು.
ಕಾವಲು ಸಮಿತಿಯವರು ಮೂರು ತಿಂಗಳಿಗೊಮ್ಮೆ ಸಭೆ ಮಾಡಬೇಕು. ಹೆಣ್ಣು ಮಕ್ಕಳ ಮೇಲೆ ಯಾರೂ ದೌರ್ಜನ್ಯ ಮಾಡುವಂತಿಲ್ಲ. ಅಧಿಕಾರಿಗಳು ಜನರಲ್ಲಿಅರಿವು ಮೂಡಿಸದೆ ಹೋದಲ್ಲಿ ದೌರ್ಜನ್ಯ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮತವನ್ನು ಹಣಕ್ಕೆ ಮಾರಾಟ ಮಾಡಿಕೊಳ್ಳಬಾರದು. ನಮ್ಮ ಮಕ್ಕಳ ಭವಿಷ್ಯ ರೂಪಿಸುವವರಿಗೆ ಮತ ನೀಡಬೇಕು. ಸಂಕೋನಟ್ಟಿಯಲ್ಲಿ ಜಾತಿ ಪದ್ಧತಿ ಇನ್ನೂ ಜೀವಂತವಾಗಿರುವುದು ಎಲ್ಲರೂ ತೆಲೆ ತಗ್ಗಿಸುವಂತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಬೌದ್ಧಧರ್ಮದ ಭಂತೇಜಿ, ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ ಸಿ.ಎಸ್. ಕುಲಕರ್ಣಿ, ಶಿವಾನಂದ ಶಿರಗಾಂವಿ, ಭೀಮ ಘರ್ಜನೆ ಯುವರಾಜ ಬಣದ ರಾಜ್ಯಾಧ್ಯಕ್ಷ ಯುವರಾಜ ಕಾಂಬಳೆ, ಮಚೇಂದ್ರ ಕಾಡಾಪುರ ಉಪಸ್ಥಿತರಿದ್ದರು. ಮಹಾದೇವ ಕೋಳಿ ಸ್ವಾಗತಿಸಿದರು. ಭರತ ಕಲಾಚಂದ್ರ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 