ಶೋಷಿತರು ಸರಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಲಿ: ಡಾ.ನಾಗಲಕ್ಷ್ಮೀ
Let the exploited come forward to get the government scheme: Dr.Nagalakshmi
ಮಾಂಜರಿ 05: ಶೋಷಿತರು ಹೋರಾಟ ಮಾಡುವ ಮೂಲಕ ಸರಕಾರದ ಯೋಜನೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಹೇಳಿದರು.
ಅವರು ಶುಕ್ರವಾರರಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಿದ್ದಾಪುರವಾಡಿ ಗ್ರಾಮದಲ್ಲಿ ಭೀಮ ಘರ್ಜನೆ ಯುವರಾಜ ಬಣ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದಲಿತ ಹಿಂದುಳಿದ ವರ್ಗಗಳ ಅಲ್ಪ ಸಂಖ್ಯಾತರ ಜಾಗೃತಿ ಸಲಹಾ ಸಮಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಅಂಬೇಡ್ಕರ ಅವರ ಅರಿವಿನ ಬೆಳಕು ತಿಳಿಸಲು ಬಂದಿರುವೆ. ಅಂಬೇಡ್ಕರ ಮಕ್ಕಳು ಪ್ರಶ್ನೆ ಮಾಡಬೇಕು. ನಾನು ಅಂಬೇಡ್ಕರ ನಿಜವಾದ ಮಗಳಾಗಿದ್ದೇನೆ. ಮಹಿಳಾ ಗ್ರಾಮ ಸಭೆಯನ್ನು ಪ್ರತಿಯೊಂದು ಗ್ರಾಮದಲ್ಲಿ ನಡೆಸಬೇಕು ಎಂದರು.
ಕಾವಲು ಸಮಿತಿಯವರು ಮೂರು ತಿಂಗಳಿಗೊಮ್ಮೆ ಸಭೆ ಮಾಡಬೇಕು. ಹೆಣ್ಣು ಮಕ್ಕಳ ಮೇಲೆ ಯಾರೂ ದೌರ್ಜನ್ಯ ಮಾಡುವಂತಿಲ್ಲ. ಅಧಿಕಾರಿಗಳು ಜನರಲ್ಲಿಅರಿವು ಮೂಡಿಸದೆ ಹೋದಲ್ಲಿ ದೌರ್ಜನ್ಯ ತಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮತವನ್ನು ಹಣಕ್ಕೆ ಮಾರಾಟ ಮಾಡಿಕೊಳ್ಳಬಾರದು. ನಮ್ಮ ಮಕ್ಕಳ ಭವಿಷ್ಯ ರೂಪಿಸುವವರಿಗೆ ಮತ ನೀಡಬೇಕು. ಸಂಕೋನಟ್ಟಿಯಲ್ಲಿ ಜಾತಿ ಪದ್ಧತಿ ಇನ್ನೂ ಜೀವಂತವಾಗಿರುವುದು ಎಲ್ಲರೂ ತೆಲೆ ತಗ್ಗಿಸುವಂತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಬೌದ್ಧಧರ್ಮದ ಭಂತೇಜಿ, ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ ಸಿ.ಎಸ್. ಕುಲಕರ್ಣಿ, ಶಿವಾನಂದ ಶಿರಗಾಂವಿ, ಭೀಮ ಘರ್ಜನೆ ಯುವರಾಜ ಬಣದ ರಾಜ್ಯಾಧ್ಯಕ್ಷ ಯುವರಾಜ ಕಾಂಬಳೆ, ಮಚೇಂದ್ರ ಕಾಡಾಪುರ ಉಪಸ್ಥಿತರಿದ್ದರು. ಮಹಾದೇವ ಕೋಳಿ ಸ್ವಾಗತಿಸಿದರು. ಭರತ ಕಲಾಚಂದ್ರ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 