ಕನ್ನಡದ ಕಂಪು ಎಲ್ಲೆಡೆ ಪಸರಿಸಲಿ...
Let the flavor of Kannada spread everywhere...
ಲೋಕದರ್ಶನ ವರದಿ
ಕನ್ನಡದ ಕಂಪು ಎಲ್ಲೆಡೆ ಪಸರಿಸಲಿ...
ವಿಜಯಪುರ 02: ನಮ್ಮ ಕರ್ನಾಟಕ ಕೇವಲ ನಾಡಲ್ಲ. ಅದು ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ. ನಮ್ಮ ಅಂತರಂಗದ ಮಾತು. ನಾವೆಲ್ಲರೂ ಕನ್ನಡ ನಾಡು-ನುಡಿ, ಭಾಷೆ, ಸಾಹಿತ್ಯ-ಸಂಸ್ಕೃತಿ ಮತ್ತು ಭವ್ಯತೆಯನ್ನು ಎತ್ತಿಹಿಡಿಯೋಣ. ಈ ದಿನವು ನಮ್ಮೆಲ್ಲ ಕನ್ನಡಿಗರ ಪಾಲಿಗೆ ಸಂಭ್ರಮದ ದಿನ. ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ-ಸಾಹಿತ್ಯ ಮತ್ತು ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಮುಖ್ಯೋಪಾಧ್ಯಾಯನಿ ಆರ್.ಎಸ್.ಕೊಪ್ಪದ ಅವರು ಅಭಿಪ್ರಾಯಪಟ್ಟರು.
ಅವರು ಬಬಲೇಶ್ವರ ತಾಲೂಕಿನ ಹೊಕ್ಕುಂಡಿಯ ತೊರವಿ ವಸ್ತಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ: 01-11-2025 ರಂದು ಜರುಗಿದ “ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ” ದಲ್ಲಿ ಮಾತನಾಡುತ್ತಿದ್ದರು.
ಇನ್ನೊರ್ವ ಶಿಕ್ಷಕಿ ಶ್ರೀಮತಿ ಶ್ರೀದೇವಿ ರೆಬಗೊಂಡ ಮಾತನಾಡಿ, ನಾವೆಲ್ಲರೂ ಈ ದಿನದಂದು ಕನ್ನಡಾಂಬೆಗೆ ಗೌರವ ಸಲ್ಲಿಸುವುದರ ಮೂಲಕ ಕನ್ನಡದ ಭಾಷಾಭಿಮಾನವನ್ನು ಹೊಂದಬೇಕು. ನಮ್ಮ ಕನ್ನಡ ಭಾಷೆಯ ಕಂಪು ಎಲ್ಲೆಡೆಯಲ್ಲಿ ಪಸರುವಂತೆ ಶ್ರಮಿಸಬೇಕು. ಎಲ್ಲಾದರೂ ಇರು, ಎಂತಾದರೂ ಇರು. ಎಂದೆಂದಿಗೂ ನೀ ಕನ್ನಡಿಗನಾಗಿರಬೇಕೆಂಬ ಮಹತ್ವಾಕಾಂಕ್ಷೆಯನ್ನು ಹೊಂದಿರಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಸಮೀತಿ ಸದಸ್ಯರು, ಊರಿನ ಹಿರಿಯರು, ಯುವಕರು, ವಿದ್ಯಾರ್ಥಿಗಳ ಪಾಲಕರು ಮತ್ತು ಮಕ್ಕಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 