ಗೃಹ ಸಚಿವ ಅಮಿತ್ ಷಾ ಗೆ ಮೆಹಬೂಬಾ ಮುಫ್ತಿ ಪುತ್ರಿ ಪತ್ರ
ಶ್ರೀನಗರ, ಆಗಸ್ಟ್ 16 ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಾರಗಳೆ ಕಳೆದಿವೆ.
ಈ ಘಟನೆ ನಡೆದಾಗಿನಿಂದ ಮೆಹಬೂಬಾ ಮುಫ್ತಿ ಪುತ್ರಿ ಇಲ್ಟಿಜಾ ಜಾವೇದ್ ಸರ್ಕಾರದ ಕ್ರಮದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೊಸದಾಗಿ ಅವರು, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದು, ತಮ್ಮ ವಾಯ್ಸ್ ಮೇಲ್ ಅನ್ನು ಸಹ ಬಿಡುಗಡೆಗೊಳಿಸಿದ್ದಾರೆ.
ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರೆ, ನಮಗೆ ಮಾತ್ರ ಆ ಅವಕಾಶವೇ ಇಲ್ಲ. ಪ್ರಾಣಿಗಳನ್ನು ಕೂಡಿಹಾಕುವಂತೆ ನಮ್ಮನ್ನು ಬಂಧಿಸಿಡಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ನನ್ನನ್ನು ಕೂಡ ನಿರ್ಬಂಧಿಸಿದ್ದಾರೆ. ಕರ್ಪ್ಯೋ ಜಾರಿಗೊಂಡಂದಿನಿಂದ ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮಾಧ್ಯಮಗಳಿಗೆ ಹೇಳಿದ್ದಕ್ಕೆ ನನಗೆ ನಿರ್ಬಂಧ ವಿಧಿಸಿ, ಬೆದರಿಸುತ್ತಿದ್ದಾರೆ. ಅದಕ್ಕಾಗಿಯೇ ನಾನು ಮತ್ತೊಮ್ಮೆ ಮಾಧ್ಯಮಗಳೊಂದಿಗೆ ಮಾತನಾಡಲು ಬಯಸುತ್ತೇನೆ. ನನ್ನನ್ನು ಅಪರಾಧಿ ಎಂದು ಪರಿಗಣಿಸಲಾಗುತ್ತದೆ. ನನ್ನ ಜೀವದ ಬಗ್ಗೆ ಭಯ ಉಂಟಾಗಿದೆ ಎಂದು ವಾಯ್ಸ್ ಮೇಲ್ ನಲ್ಲಿ ತಿಳಿಸಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 