ಗೃಹ ಸಚಿವ ಅಮಿತ್ ಷಾ ಗೆ ಮೆಹಬೂಬಾ ಮುಫ್ತಿ ಪುತ್ರಿ ಪತ್ರ
ಶ್ರೀನಗರ, ಆಗಸ್ಟ್ 16 ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಾರಗಳೆ ಕಳೆದಿವೆ.
ಈ ಘಟನೆ ನಡೆದಾಗಿನಿಂದ ಮೆಹಬೂಬಾ ಮುಫ್ತಿ ಪುತ್ರಿ ಇಲ್ಟಿಜಾ ಜಾವೇದ್ ಸರ್ಕಾರದ ಕ್ರಮದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೊಸದಾಗಿ ಅವರು, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದು, ತಮ್ಮ ವಾಯ್ಸ್ ಮೇಲ್ ಅನ್ನು ಸಹ ಬಿಡುಗಡೆಗೊಳಿಸಿದ್ದಾರೆ.
ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರೆ, ನಮಗೆ ಮಾತ್ರ ಆ ಅವಕಾಶವೇ ಇಲ್ಲ. ಪ್ರಾಣಿಗಳನ್ನು ಕೂಡಿಹಾಕುವಂತೆ ನಮ್ಮನ್ನು ಬಂಧಿಸಿಡಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪತ್ರದಲ್ಲಿ ದೂರಿದ್ದಾರೆ.
ನನ್ನನ್ನು ಕೂಡ ನಿರ್ಬಂಧಿಸಿದ್ದಾರೆ. ಕರ್ಪ್ಯೋ ಜಾರಿಗೊಂಡಂದಿನಿಂದ ಕಾಶ್ಮೀರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮಾಧ್ಯಮಗಳಿಗೆ ಹೇಳಿದ್ದಕ್ಕೆ ನನಗೆ ನಿರ್ಬಂಧ ವಿಧಿಸಿ, ಬೆದರಿಸುತ್ತಿದ್ದಾರೆ. ಅದಕ್ಕಾಗಿಯೇ ನಾನು ಮತ್ತೊಮ್ಮೆ ಮಾಧ್ಯಮಗಳೊಂದಿಗೆ ಮಾತನಾಡಲು ಬಯಸುತ್ತೇನೆ. ನನ್ನನ್ನು ಅಪರಾಧಿ ಎಂದು ಪರಿಗಣಿಸಲಾಗುತ್ತದೆ. ನನ್ನ ಜೀವದ ಬಗ್ಗೆ ಭಯ ಉಂಟಾಗಿದೆ ಎಂದು ವಾಯ್ಸ್ ಮೇಲ್ ನಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 