ಗ್ರಂಥಪಾಲಕ ಚಿರಂಜೀವಿಗೆ ಪಿ.ಎಚ್.ಡಿ ಪದವಿ ಪ್ರದಾನ
Librarian Chiranjeevi awarded PhD degree
ಮುಧೋಳ 19: ಬಾಗಲಕೋಟ ಬಿವ್ಹಿವ್ಹಿ ಸಂಘದ ನಗರದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ ಕೇಂದ್ರದ ಗ್ರಂಥಪಾಲಕ ಚಿರಂಜೀವಿ ಎಲ್.ಎಮ್ ಅವರಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ರಮೇಶ ಆರ್.ನಾಯ್ಕ ಅವರ ಮಾರ್ಗದರ್ಶನದಲ್ಲಿ ಡಿಜಿಟಲ್ ಲೈಬ್ರರಿ ಇನ್ ಫ್ರಾಸ್ಟ್ರಕ್ಚರ್ ಆ್ಯಂಡ್ ಫೆಸಿಲೀಟೀಸ್ ಇನ್ ದಿ ಯುನಿವರ್ಸಿಟಿ ಲೈಬ್ರರೀಸ್ ಆಫ್ ಕರ್ನಾಟಕ ಆ್ಯನ್ ಇವ್ಯಾಲ್ಯುಯೆಟೀವ್ ಸ್ಟಡಿ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ಪ್ರಧಾನ ಮಾಡಿದೆ.
ಚಿರಂಜೀವಿ ಅವರನ್ನು ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಎಸ್. ಸೂಳಿಭಾವಿ, ಬಿವ್ಹಿವ್ಹಿ ಸಂಘದ ಆಡಳಿತಾಧಿಕಾರಿ ಡಾ.ವಿಜಯಕುಮಾರ ಎಸ್. ಕಟಗಿಹಳ್ಳಿಮಠ, ಸಂಘದ ಪದವಿ ಕಾಲೇಜುಗಳ ಗುಣಮಟ್ಟ ಭರವಸೆಯ ಕೋಶದ ಮುಖ್ಯ ಸಲಹೆಗಾರ್ತಿ ಡಾ.ಮೀನಾ ಆರ್. ಚಂದಾವರಕರ, ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಪದನಿಮಿತ್ಯ ಕಾರ್ಯದರ್ಶಿ ಡಾ.ಎಸ್.ಎಮ್.ಗಾಂವಕರ ಮತ್ತು ಸಂಘದ ಸರ್ವ ಸದಸ್ಯರು ಹಾಗೂ ಕಾಲೇಜಿನ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಆರ್. ಜರಂಕುಂಟಿ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 