ಗುರುವಿಗೆ ಶರಣಾದರೆ ಜೀವನ ಸಾರ್ಥಕ : ಪ್ರೊ. ಕಸ್ತೂರಿ ದಳವಾಯಿ
Life is meaningful if you surrender to the Guru: Prof. Kasturi Dalwai
ಗದಗ 18: ತಾಯಿ, ತಂದೆ, ಗುರು ಪ್ರತಿಯೊಬ್ಬರ ಜೀವನದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ. ಒಳ್ಳೆಯ ಸಂಸ್ಕಾರ ನೀಡಿ, ಮಾನವಿ?ಯ ಮೌಲ್ಯ ತಿಳಿಸುತ್ತಾರೆ. ಈ ಮೂವರನ್ನು ಯಾವಾಗಲೂ ಗೌರವಿಸಬೇಕು ಎಂದು ಗದುಗಿನ ಸರ್ಕಾರಿ ಪ್ರಥಮದರ್ಜೆ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ. ಕಸ್ತೂರಿ ದಳವಾಯಿ ತಿಳಿಸಿದರು.
ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜರುಗಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಜೀವನ ಮೌಲ್ಯಗಳನ್ನು ತಿಳಿದು ಮೌಲ್ಯಾಧಾರಿತ ಬದುಕು ತಮ್ಮದಾಗಿಸಿಕೊಳ್ಳಬೇಕು. ಹಿರಿಯರಿಗೆ ಗೌರವ ನೀಡುವ, ಅವರ ಹೇಳಿದ ಬುದ್ಧಿ ಮಾತುಗಳನ್ನು ಕೇಳಿ ಕಲಿಯಬೇಕು. ಕಲಿತ ವಿದ್ಯಾಲಯಕ್ಕೂ ಹೆತ್ತವರಿಗೂ ಕೀರ್ತಿ ತರಬೇಕು.
ಕಲಿಕೆಯು ನಿರಂತರ ಪ್ರಕ್ರಿಯೆಯಾಗಿದ್ದು, ಉತ್ತಮ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಇದರಿಂದ ಜ್ಞಾನದ ವಿಕಾಸ ಆಗುವುದು. ಶೈಕ್ಷಣಿಕವಾಗಿ ಪದವಿ ಪೂರ್ವ ಹಂತ ಪ್ರತಿಯೊಬ್ಬ ವಿದ್ಯಾರ್ಥಿಗೂ ಅತ್ಯಂತ ಮಹತ್ವದ ಮತ್ತು ಜೀವನ ತಿರುವಿನ ಘಟ್ಟ. ಈ ಹಂತದಲ್ಲಿ ಸತತ ಅಧ್ಯಯನ ಮಾಡಿ ಉತ್ತಮ ಜ್ಞಾನ ಹಾಗೂ ಅಂಕ ಪಡೆದರೆ ಬದುಕಿಗೊಂದು ಭದ್ರ ಬುನಾದಿ ಹಾಕಿದಂತೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ರಜನಿ ಪಾಟೀಲ ಮಾತನಾಡಿ ಗುಣಮಟ್ಟದ ಶಿಕ್ಷಣ ಎಂದರೆ ಹೆಚ್ಚು ಅಂಕಗಳ್ನು ಪಡೆದು ಉದ್ಯೋಗಕ್ಕೆ ಸೇರುವುದಲ್ಲ. ಬದಲಿಗೆ ಬದುಕಿನಲ್ಲಿ ಮೌಲ್ಯ ಮತ್ತು ಆದರ್ಶಗಳನ್ನು ಕಲಿಯುವುದಾಗಿದೆ. ಆದರೆ ಇಂದಿನ ದಿನಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಕಾಣಲಾಗುತ್ತಿಲ್ಲ.
ನಮ್ಮ ಪೂರ್ವಜರು ಮೌಲ್ಯ ಮತ್ತು ಗೌರವಕ್ಕಾಗಿ ಬದುಕಿದವರು. ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಲು, ಆದರ್ಶ ಬದುಕನ್ನು ಕಟ್ಟಿಕೊಳ್ಳಲು, ಶಿಸ್ತನ್ನು ರೂಢಿಸಿಕೊಳ್ಳಲು ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆಗಳು ಸಹಕಾರಿಯಾಗಲಿವೆ. ಹಿಂದೆ ಶಿಕ್ಷಣ ಪಡೆಯಲು ಯಾವುದೇ ಸೌಲಭ್ಯಗಳು ಇರಲಿಲ್ಲ.
ಆದರೆ ಇಂದು ಶಿಕ್ಷಣ ಪಡೆಯಲು ಸಾಕಷ್ಟು ಸೌಲಭ್ಯ ಮತ್ತು ಅವಕಾಶಗಳಿವೆ. ನಮಗೆ ಸಿಕ್ಕಿರುವ ಅವಕಾಶ ಮತ್ತು ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಬೇಕು. ತರಗತಿಯ ಪಾಠದೊಂದಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಬೇಕು. ಇದರ ಜೊತೆಗೆ ವೇದಿಕೆ ಮೇಲೆ ನಿರರ್ಗಳವಾಗಿ ಮಾತನಾಡುವ ಹವ್ಯಾಸವನ್ನು ಬೆಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರನ್ನು ಪ್ರಾಚಾರ್ಯರಾದ ಡಾ. ಶ್ರೀಮತಿ ಎ. ಕೆ. ಮಠ ಸ್ವಾಗತಿಸಿದರು. ಡಾ. ವೀಣಾ ಈ ಅತಿಥಿಗಳನ್ನು ಪರಿಚಯಿಸಿದರು.ಕು. ಸೋನಿಯಾ ಘೋಡ್ಕೆ ಮತ್ತು ಕು. ಸಹನಾ ಪ್ರಾರ್ಥಿಸಿದರು. ಕು. ಶೃತಿ ಅಳಗೊಂಡಿ, ಕು. ಸಹನಾ ಹಿರೇಮಠ ನೃತ್ಯ ಕಾರ್ಯಕ್ರಮ ನೀಡಿದರು. ಕಳೆದ ವರ್ಷ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಡಾ. ವಿಠ್ಠಲ ಕೋಳಿ ವಿದ್ಯಾರ್ಥಿ ಒಕ್ಕೂಟ ಪರಿಚಯಿಸಿದರು. ಕು. ಮೇಘಾ ಮುದ್ದಿ, ಕು. ಗಾಯತ್ರಿ ಮಾದಗುಂಡಿ, ಕು. ಕೀರ್ತಿ ಕಲಬುರ್ಗಿ ಮಹಾವಿದ್ಯಾಲಯದ ಕುರಿತಾಗಿ ತಮ್ಮ ಸಿಹಿ ಅನುಭವಗಳನ್ನು ಹಂಚಿಕೊಂಡರು. ಪ್ರೊ. ವಿಶಾಲ ತೆಳಗಡೆ ವಂದಿಸಿದರು. ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎಲ್ಲ ವಿದ್ಯಾರ್ಥಿ ವೃಂದ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 