ಬೆಳಗಾವಿ: ಮಿಂಚಿನ ಮತದಾರರ ನೋಂದಣಿ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 05: ಕೆ.ಎಲ್.ಎಸ್. ಗೋಗಟೆ ವಾಣಿಜ್ಯ ಮಹಾವಿದ್ಯಾಲಯ ಬೆಳಗಾವಿಯ ಚುನಾವಣಾ ಸಾಕ್ಷರತಾ ಸಂಘ ಹಾಗೂ ಮತದಾರ ಜಾಗೃತಿ ವೇದಿಕೆ ಮೂಲಕ ಮಿಂಚಿನ ಮತದಾರರ ನೋಂದಣಿ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ವಿದ್ಯಾಥರ್ಿಗಳಿಗೆ ಚಚರ್ಾ ಸ್ಪಧರ್ೆ, ರಸಪ್ರಶ್ನೆ, ಚಿತ್ರಕಲಾ ಸ್ಪಧರ್ೆ ಹಮ್ಮಿಕೊಳ್ಳಲಾಗಿತ್ತು. ಮತ್ತು ಓಟು ಹಾಕೋಣ ಬನ್ನಿ ಎಂಬ ವಿಷಯದ ಮೇಲೆ ಅಣುಕು ನಾಟಕ ಪ್ರದಶರ್ಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು ನಾಲ್ಕನೂರು ವಿದ್ಯಾಥರ್ಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಮೂನೆ ನಂ. 6 (ನೋಂದಣಿ) ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಚಾರ್ಯ ಡಾ. ಎಚ್.ಎಚ್. ವೀರಾಪೂರ ರವರು ಮಾತನಾಡಿ ದಿ.01ಕ್ಕೆ 18 ವರ್ಷ ತುಂಬಿದ ಎಲ್ಲ ವಿದ್ಯಾಥರ್ಿಗಳು ಮತದಾರರ ಯಾದಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ತಿಳಿಸಿದರು. ಇದೇ ವೇಳೆ ಡಾ. ಎಮ್.ಎಲ್. ಲಮಾಣಿ ವಿದ್ಯಾಥರ್ಿಗಳನ್ನು ಉದ್ದೇಶಿಸಿ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ತಿಳಿಸಿಕೊಟ್ಟರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಪ್ರೊ. ಎ.ಆರ್. ನೀರಲಕೇರಿ, ಕಾರ್ಯಕ್ರಮ ಸಂಯೋಜಿಸಿದರು. ವಿನಾಯಕ ಕುಲಕಣರ್ಿ ಕಾರ್ಯಕ್ರಮವನ್ನು ನಿರೂಪಿಸಿ ಕೊನೆಗೆ ವಂದನಾರ್ಪಣೆಯನ್ನು ಕೈಗೊಂಡರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 