ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ
Lightning strikes coconut tree, sets it on fire
ಲೋಕದರ್ಶನ ವರದಿ
ಹೂವಿನಹಡಗಲಿ 22: ಪಟ್ಟಣ ಸೇರಿದಂತೆ ತಾಲ್ಲೂಕಿನ ನಾನಾ ಕಡೆಗಳಲ್ಲಿ ಮಂಗಳವಾರ ಸಂಜೆ ಗುಡುಗು, ಸಿಡಿಲು, ಗಾಳಿ, ಮಳೆ ಸುರಿದಿದ್ದು, ನದಿ ತೀರದ ಭತ್ತ,ಬಾಳೆ ಬೆಳೆಗಳಿಗೆ ಹಾನಿಯಾಗಿ ಲಕ್ಷಾಂತರ ನಷ್ಟವಾಗಿದೆ. ಪಟ್ಟಣದ 10ನೇ ವಾರ್ಡ್ ಸೊಪ್ಪಿನ ಕಾಳಮ್ಮ ಬಡಾವಣೆಯ ಜನವಸತಿಗೆ ಹೊಂದಿಕೊಂಡಿರುವ ಹುಚ್ಚಿ ಉಮಾಪತಿ ಅವರ ತೋಟದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಡಿದು ಅದು ಹೊತ್ತಿ ಉರಿಯಿತು. ಸಂಜೆ ಗುಡುಗು, ಮಿಂಚು, ಸಿಡಿಲ ಆರ್ಭಟದೊಂದಿಗೆ ಕೆಲಕಾಲ ತುಂತುರು ಮಳೆ ಸುರಿಯಿತು. ಈ ವೇಳೆ ತೆಂಗಿನ ಮರಕ್ಕೆ ಸಿಡಿಲು ಎರಗಿ ಬೆಂಕಿ ಹೊತ್ತಿಕೊಂಡಿತು. 30 ನಿಮಿಷ ಕಾಲ ಮರ ಹೊತ್ತಿ ಉರಿಯಿತು. ಕೆಲವರು ಆ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದರು.ಈ ವೇಳೆ ತುಂತುರು ಮಳೆ ಸುರಿದಿದ್ದರಿಂದ ಮರದಲ್ಲಿನ ಬೆಂಕಿ ನಂದಿತು. ಸಿಡಿಲ ಸದ್ದಿಗೆ ಬಡಾವಣೆ ನಿವಾಸಿಗಳು ಬೆಚ್ಚಿ ಬಿದ್ದರು.ಸೋಮವಾರ ರಾತ್ರಿಯೂ ಹರಪನಹಳ್ಳಿ ಭಾಗದಲ್ಲಿ ಭಾರಿ ಗಾಳಿ ಸಹಿತ ಮಳೆ ಸುರಿದಿತ್ತು. ತಾಲ್ಲೂಕಿನ ಹಲುವಾಗಲು ಗ್ರಾಮದ ಕೆಇಬಿ ಕಚೇರಿ ಬಳಿಯ ಬಡಾವಣೆಯಲ್ಲಿ ಹಾವೇರಿ ವಿರೂಪಾಕ್ಷಪ್ಪ ಎಂಬುವವರ ಮನೆಯ ತಗಡಿನ ಚಾವಣಿ ಗಾಳಿಗೆ ಹಾರಿ ಮುರಿದು ಬಿದ್ದಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 