ಸತ್ಪುರುಷರ ವಾಣಿ ಆಲಿಸಿದರೆ ಮನುಷ್ಯನ ಜೀವನ ಸಾರ್ಥಕ: ವಾಲಿಕಾರ
Listening to the voice of good people makes a person's life meaningful: Valikar
ಸಿಂದಗಿ 13: ಶರಣರ ಸತ್ಪುರುಷರ ವಾಣಿ ಆಲಿಸಿದರೆ ಮನುಷ್ಯನ ಜೀವನ ಸಾರ್ಥಕ ಎಂದು ಕಸಪಾ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
ತಾಲೂಕಿನ ಚಟ್ಟರಕಿ ರೇಣುಕಾಚಾರ್ಯ ಮಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ನಿಮಿತ್ಯ ಹಮ್ಮಿಕೊಂಡ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಮಹಾಮಂಗಲೋತ್ಸವ ಹಾಗೂ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶರಣರು ಸಾವಿರಾರು ವರ್ಷಗಳ ಕಾಲ ಬಾಳಿ ಬೆಳಗಿದವರು. ಭಾರತೀತ ಸಂಸ್ಕೃತಿ ಆಧ್ಯಾತ್ಮಿಕ ಚಿಂತನೆಗಾಗಿ ಬೆಳಗಿ ಬಂದಿದ್ದು, ಇಲ್ಲಿ ಯೋಗಿ ತ್ಯಾಗಿಗಳಾಗಿ ಹೋಗಿದ್ದಾರೆ. ನಮ್ಮ ನೆಮ್ಮದಿಯ ಬದುಕಿಗೆ ಪುರಾನ ಪ್ರವಚನ ಪೂರಕವಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ, ಹಬ್ಬ ಹರಿದಿನಗಳು ಸಾಮರಸ್ಯ ಮೂಡಿಸುತ್ತಿವೆ ಎಂದರು.
ಈ ವೇಳೆ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಹಾಗೂ ಡಾ.ಬಾಬು ರಾಜೇಂದ್ರ ನಾಯಕ ಮಾತನಾಡಿ, ಜೀವನದಲ್ಲಿ ಆರೋಗ್ಯವೇ ಭಾಗ್ಯ. ನಾವುಗಳೆಲ್ಲ ಇಂದು ಹೆಚ್ಚಿನ ಗಮನವನ್ನು ಆರೋಗ್ಯದೆಡೆಗೆ ಹರಿಸಬೇಕು. ನಮ್ಮ ದೈನಂದಿನ ಬದುಕಿನಲ್ಲಿ ಆರೋಗ್ಯದ ಕಾಳಜಿಯ ಜೊತೆಗೆ ಆದ್ಯಾತ್ಮಿಕ ಚಿಂತನೆಗಳನ್ನು ಆಲಿಸಬೇಕು. ಆದ್ಯಾತ್ಮದ ಅರಿವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಚಟ್ಟರಕಿ ಗ್ರಾಮವನ್ನು ವ್ಯಸನ ಮುಕ್ತ ಗ್ರಾಮವನ್ನಾಗಿ ಮಾಡಿ ಆರೋಗ್ಯವಾಗಿರಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಆಲಮೇಲ ಶ್ರೀಮಠದ ಚಂದ್ರಶೇಖರ ಶಿವಾಚಾರ್ಯರು, ಬಂಥನಾಳ ಶ್ರೀಮಠದ ಡಾ.ವೃಷಭಲಿಂಗ ಮಹಾಶಿವಯೋಗಿಗಳು ಆಶೀವರ್ಚನ ನೀಡಿ ಮಾತನಾಡಿದರು. ಈ ವೇಳೆ ಸಿದ್ದಾರೂಢ ಶಾಲೆಯ ಮಕ್ಕಳಿಂದ ನೃತ್ಯ, ಸಂಗೀತ ಕಾರ್ಯಕ್ರಮ ಜರುಗಿದವು. ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಅಭಿನವ ರುದ್ರಮುನಿ ಶಿವಾಚಾರ್ಯರು, ಸಿಂದಗಿ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಪಿ.ಆರ್.ಚೌಕಿಮಠ, ಸದಾಶಿವ ಹಿರೇಮಠ, ಶಂಕರಲಿಂಗಯ್ಯ ಹಿರೇಮಠ, ಅಯ್ಯನಗೌಡ ಪಾಟೀಲ, ನಾಗಪ್ಪ ಶಿವೂರ, ದೊಡ್ಡಪ್ಪಗೌಡ ಪಾಟೀಲ, ಭೀಮಾಶಂಕರ ಪಟ್ಟಣಶೆಟ್ಟಿ, ಗಂಗಮ್ಮ ಪಾಟೀಲ, ಗಂಗವ್ವ ಚಟ್ಟರಕಿ, ಮಹಾದೇವಿ ತಳವಾರ, ಸರಸ್ವತಿ ನಾಟೀಕಾರ, ಮಲ್ಲನಗೌಡ ಪಾಟೀಲ, ಅನಿತಾ ಬಡಿಗೇರ, ಶಕೀಲ ಲಾಳಸಂಗಿ, ಶರಣಬಸು ಬೂದಿಹಾಳ, ಹಣಮಂತ ಪೂಜಾರಿ, ಭೀಮನಗೌಡ ಬಿರಾದಾರ, ಮಡ್ಡಪ್ಪ ಹಳ್ಳಿ, ಬಸವರಾಜ ಬಿರಾದಾರ, ಜೆಟ್ಟೆಪ್ಪ ಭಾಸ್ಕರ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಚಂದ್ರಶೇಖರ ನಾಗರಬೆಟ್ಟ, ಸಂಗನಗೌಡ ಪಾಟೀಲ ಅಗಸಬಾಳ, ನವೀನ ಶೆಳ್ಳಗಿ ಸೇರಿದಂತೆ ಚಟ್ಟರಕಿ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಶ್ರೀಮಠದ ಭಕ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 