ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂಕೋರ್ಟನಲ್ಲಿ ದಾವೆ
ನವದೆಹಲಿ,12 ಸಂಸತ್ತಿನಲ್ಲಿ
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರದ ಸಿಂಧುತ್ವ
ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ದಾವೆ ಭಾರತೀಯ
ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನಿರ್ಧರಿಸಿದೆ. ಸಂಸತ್ತಿನಲ್ಲಿ ಬುಧವಾರ ಮಸೂದೆ ಅಂಗೀಕಾರವಾದ
ನಂತರ ಸರಕಾರಕ್ಕೆಈಗ ಹೊಸ ಕಾನೂನು ಸಮಸ್ಯೆ ಎದುರಾಗಲಿದೆ
. ಪೌರತ್ವ ಮಸೂದೆ ಒಮ್ಮೆ ಸಂಸತ್ತಿನಲ್ಲಿ ಅಂಗೀಕಾರವಾದ ತಕ್ಷಣ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಐಯುಎಂಎಲ್ ಈ ಹಿಂದೆಯೇ ಹೇಳಿತ್ತುಧರ್ಮ ಆಧಾರಿತ ಪೌರತ್ವ
ಮಸೂದೆ ಜಾರಿಗೆ ತರುವ ಮೂಲಕ ಈ ಮಸೂದೆ ಸಂವಿಧಾನದ
14ನೇ ವಿಧಿಯನ್ನು ಉಲ್ಲಂಘನೆ ಮಾಡಿದೆ ಎಂದೂ ಅರ್ಜಿಯಲ್ಲಿ
ಆರೋಪಿಸಲಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯು ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಲ್ಲಿ
ಧಾರ್ಮಿಕ ಕಿರುಕುಳ, ದೌರ್ಜನ್ಯಕ್ಕೆ ಒಳಗಾದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡಲು
ಅವಕಾಶ ಕಲ್ಪಿಸಲಿದೆ. ಪೌರತ್ವ ಮಸೂದೆ ಗೆ ಬುಧವಾರ
ರಾಜ್ಯಸಭೆ ಸಹ ಅಂಗೀಕಾರ ನೀಡಿದ್ದು ಇದರಿಂದ ಮಸೂದೆಗೆ
ಸಂಸತ್ತಿನ ಎರಡೂ ಸದನಗಳ ಅನುಮೋದನೆ ದೊರಕಿದಂತಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 