ನೇರ ಫೋನ್-ಇನ್ ಕಾರ್ಯಕ್ರಮ: ಕ್ಯಾನ್ಸರ್ ಜಾಗೃತಿ
Live Phone-in Program: Cancer Awareness
ಲೋಕದರ್ಶನ ವರದಿ
ನೇರ ಫೋನ್-ಇನ್ ಕಾರ್ಯಕ್ರಮ: ಕ್ಯಾನ್ಸರ್ ಜಾಗೃತಿ
ಬೆಳಗಾವಿ 04: ಕೆಎಲ್ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಕೇಂದ್ರ ಬೆಳಗಾವಿ, ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಬೆಳಗಾವಿ ಮತ್ತು ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬುಧವಾರ ದಿ. 4ರಂದು ವಿಶ್ವ ಕ್ಯಾನ್ಸರ್ ದಿನ ಅಂಗವಾಗಿ ಕ್ಯಾನ್ಸರ್ಗೆ ಸಂಬಂಧಿಸಿದಂತೆ ಪ್ರಶ್ನೋತ್ತರ ಮೂಲಕ ಜಾಗೃತಿ ಮೂಡಿಸಲಾಯಿತು. ಕೆಎಲ್ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಮತ್ತು ಕೆಎಲ್ಇ ಕ್ಯಾನ್ಸರ ಆಸ್ಪತ್ರೆಯ ತಜ್ಞ ವೈದ್ಯ ಡಾ. ಕುಮಾರ ವಿಂಚುರಕರ್ ಅವರು ಭಾಗವಹಿಸಿ ವಿಶ್ವ ಕ್ಯಾನ್ಸರ್ ದಿನದ ಇತಿಹಾಸ, ಮಹತ್ವದ ಕುರಿತು ಮಾಹಿತಿ ಹಂಚಿಕೊಂಡರು.
ಪ್ರತಿವರ್ಷ ಫೆ. 4ರಂದು ವಿಶ್ವ ಕ್ಯಾನ್ಸರ್ ದಿನವನ್ನು ಯೂನಿಯನ್ ಫಾರ್ ಇಂಟರನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ ನೇತೃತ್ವದಲ್ಲಿ ಆಚರಿಸಲಾಗುತ್ತಿದೆ, ಯುನೈಟೆಡ್ ಬೈ ಯುನಿಕ್ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ಪ್ರಾರಂಭಿಕ ಹಂತದಲ್ಲಿ ರೋಗವನ್ನು ಪತ್ತೆ ಹಚ್ಚುವುದರ ಜೊತೆಗೆ ಪರಿಣಾಮಕಾರಿ ಚಿಕಿತ್ಸೆ ನೀಡುವುದು ಮತ್ತು ಸಮುದಾಯದ ಜನರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗ ಪತ್ತೆ ಹಚ್ಚುವುದು ಹೇಗೆ? ಕ್ಯಾನ್ಸರ್ ತಡಗಟ್ಟುವಿಕೆ, ರೋಗದ ಲಕ್ಷಣಗಳು ಮತ್ತು ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡರು. ಬೆಳಗಾವಿಯಲ್ಲಿಯ ಕೆಎಲ್ಇ ಸಂಸ್ಥೆಯ ನೂತನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ಗೆ ಇರುವ ಚಿಕಿತ್ಸೆ ಮತ್ತು ಆಸ್ಪತ್ರೆಯಲ್ಲಿನ ಸೇವಾ ಸೌಲಭ್ಯಗಳ ಕುರಿತು ತಿಳಿಸಿದರು ಮತ್ತು ಕೇಳುಗರ ಕ್ಯಾನ್ಸರ್ ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 