ಸರ್ಕಾರದ ಯೋಜನೆಗಳ ಪಡೆದು ಸ್ವಾವಲಂಬಿ ಜೀವನ ನಡೆಸಿ: ರಾಜು ಕಾಗೆ
Live a self-reliant life by availing government schemes: Raju Kage
ಕಾಗವಾಡ 26: ರಾಜ್ಯ ಸರ್ಕಾರ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಸಾಗಿಸುವುದಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡು, ಸ್ವಾವಲಂಬಿ ಜೀವನ ನಡೆಸಬೇಕೆಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.
ಅವರು, ಶುಕ್ರವಾರ ದಿ. 25 ರಂದು ತಾಲೂಕಿನ ಉಗಾರ ಖುರ್ದ ಪುರಸಭೆಯ ಆವರಣದಲ್ಲಿ ಸನ್ 2024-25 ರ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಂತ-4ರ ಅಡಿಯಲ್ಲಿ 70 ಲಕ್ಷ ವೆಚ್ಚದ 988 ಹೊಲಿಗೆ ಯಂತ್ರಗಳನ್ನು ಫಲಾನುಭವಿ ಮಹಿಳೆಯರಿಗೆ ವಿತರಣೆ ಮಾಡಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಪ್ರತಿಯೊಂದು ಪಟ್ಟಣಗಳಲ್ಲಿ ಶುದ್ದ ಕುಡಿಯುವ ನೀರು, ಒಳ್ಳೆಯ ರಸ್ತೆ, ಚರಂಡಿ, ವಿದ್ಯುತ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳು, ನಿರುದ್ಯೋಗ ಯುವಕರಿಗೆ ಹಾಗೂ ಮಹಿಳೆಯರಿಗಾಗಿ ಹಲಾವರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ವೇಳೆ ಪುರಸಭೆ ಅಧ್ಯಕ್ಷೆ ಪಾತಿಮಾ ನದಾಫ, ಉಪಾಧ್ಯಕ್ಷ ಸತೀಶ ಜಗತಾಪ, ಮುಖ್ಯಾಧಿಕಾರಿ ಮಹಾಂತೇಶ ಕೌಲಾಪೂರ ಸೇರಿದಂತೆ ಪಟ್ಟಣದ ಮುಖಂಡರು, ಪುರಸಭೆಯ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 