ದೇಶದ ಸತ್ಪ್ರಜೆಗಳಾಗಿ ಬಾಳಿರಿ: ಶ್ರೀ ಪಿ ಗಾದೆಪ್ಪ
Live as good citizens of the country: Shri P. Gadeppa
ಲೋಕದರ್ಶನ ವರದಿ
ಬಳ್ಳಾರಿ 15: ವಿದ್ಯಾರ್ಥಿ ಜೀವನ ಬಂಗಾರದ ದಿನಗಳ ಜೀವನ, ನೀವು ನಿಮ್ಮ ಪದವಿ ಮುಗಿಸಿಕೊಂಡು ಇನ್ನೂ ಉನ್ನತ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಉದ್ಯೋಗ ಪಡೆದು ನಿಮ್ಮ ತಾಯಿ ತಂದೆಗಳಿಗೆ, ವಿದ್ಯೆ ಕಲಿಸಿದ ಸಂಸ್ಥೆಗೆ ಹೆಸರು ತರುವಂತಹ ಈ ದೇಶದ ಸತ್ಪ್ರಜೆಗಳಾಗಿ ಬಾಳಿರಿ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀ ಪಿ ಗಾದೆಪ್ಪ ಅವರು ಅಭಿಪ್ರಾಯ ಪಟ್ಟರು. ಶನಿವಾರ ನಗರದ ಶ್ರೀ ಜೋಳದರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಲಾರ್ಡ್ಸ್ ವಿದ್ಯಾಸಂಸ್ಥೆಯ ಇಂಡೋ-ಅಮೆರಿಕನ್ ಪದವಿ ಕಾಲೇಜು ವಿದ್ಯಾರ್ಥಿಗಳ ಬಿಳ್ಕೋಡಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಆರಂಭದಲ್ಲಿ ಲಾರ್ಡ್ಸ್ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಪಿ ಎಚ್ ನಾಯ್ಡು ಅವರು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ಇಂದು ಂಋು (ಕೃತಕ ಬುದ್ಧಿಮತ್ತೆ) ಅವಶ್ಯಕತೆ ತುಂಬಾ ಇದ್ದು ಇದರ ಜ್ಞಾನವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಇಂದಿನ ಂಋ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು ಎಂದು ಕರೆಕೊಟ್ಟು ಮುಂದಿನ ದಿನಗಳಲ್ಲಿ ನಿಮ್ಮ ಭವಿಷ್ಯ ಸುಖಮಯವಾಗಿರಲಿ ಎಂದು ಆಶಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 