ಜೀವಂತ ಮೊಸಳೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರವಾನೆ
Live crocodile captured and sent to Forest Department officials
ಮಾಂಜರಿ, 20 : ಗ್ರಾಮಸ್ಥರು ಜೀವಂತ ಮೊಸಳೆಯನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದಂತ ಘಟನೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಸಾಯಂಕಾಲ 7 ಗಂಟೆಗೆ ಶಹಾಪುರ ರಸ್ತೆಯಲ್ಲಿ ಸುಮಾರು 7-8 ಅಡಿಯ ಮೊಸಳೆಯೊಂದು ಉಡಾಡುತಿತ್ತು.ಭಯದ ವಾತಾವರಣ ಸೃಷ್ಠಿಸಿತ್ತು.ಇದನ್ನು ಗಮನಿಸಿದ ಗ್ರಾಮಸ್ಥರು ಹಗ್ಗ ಹಾಗೂ ಕಟ್ಟಿಗೆಯ ಸಹಾಯದಿಂದ ಮೊಸಳೆಯನ್ನು ಹಿಡಿದು ಕಂಬಕ್ಕೆ ಕಟ್ಟಿಹಾಕಿ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದರು.
ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ಶಹಾಪೂರ ರಸ್ತೆಯ ತಗ್ಗು ಪ್ರದೇಶಗಳಲ್ಲಿ ಬಹಳಷ್ಟು ಮೊಸಳೆಗಳು ಇವೆ.ಅರಣ್ಯ ಇಲಾಖೆಯ ಅಧಿಕಾರಿಗಳು ಮುತವರ್ಜಿಸಿ ಆ ಮೊಸಳೆಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಿ, ಗ್ರಾಮಸ್ಥರಲ್ಲಿನ ಭಯ ದೂರಮಾಡಬೇಕೆಂದು ಸ್ಥಳೀಯರು ಮನವಿಯನ್ನು ಮಾಡಿಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 