ಗುರುನಾನಕ್ ಕೃತಿಗಳ ಲೋಕಾರ್ಪಣೆ
ನವದೆಹಲಿ, ನ 7: ಗುರುನಾನಕ್ ಅವರ 550 ನೇ ಜನ್ಮ ವರ್ಷಾಚರಣೆ ಅಂಗವಾಗಿ ಅವರ ಸಂದೇಶಗಳನ್ನು ಜಗತ್ತಿಗೆ ಪ್ರಚುರಪಡಿಸಲು ಅನುಕೂಲವಾಗುವಂತೆ ನ್ಯಾಷನಲ್ ಬುಕ್ ಟ್ರಸ್ಟ್ (ಎನ್ ಬಿ ಟಿ) ಪ್ರಕಟ ಮಾಡಿರುವ ಮೂರು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ನವದೆಹಲಿಯಲ್ಲಿ ಗುರುವಾರ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಕೇಂದ್ರ ಸಚಿವೆ ಹಸ್ರಿಮ್ರತ್ ಕೌರ್ ಬಾದಲ್, ಪಂಜಾಬ್ ನ ಅನೇಕ ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ. ಇದೇ 12 ರಂದು ಗುರುನಾನಕ್ ಜಯಂತಿ ನಡೆಯಲಿದ್ದು, ಭಾರತ ಸೇರಿದಂತೆ ವಿಶ್ವಾದ್ಯಂತ ಸಾವಿರಾರು ಸಿಖ್ ಯಾತ್ರಾರ್ಥಿಗಳು ಪಾಕಿಸ್ತಾನದ ಕರ್ತಾರ್ಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಇದೇ 9 ಶನಿವಾರದಂದು ಕರ್ತಾರ್ಪುರ್ ಕಾರಿಡಾರ್ ಉದ್ಘಾಟನೆಯಾಗಲಿದ್ದು ಮಾಜಿ ಪ್ರಧಾನಮಂತ್ರಿ ಡಾ.ಮನ್ ಮೋಹನ್ ಸಿಂಗ್ ಸೇರಿದಂತೆ ಸಿಖ್ ಯಾತ್ರಿಕರ ಉನ್ನತ ನಿಯೋಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 