ಲಾಕ್ ಡೌನ್ ; ಎಸ್ ಎಸ್ ಎಲ್ ಸಿ, ಪಿ ಯು ಸಿ ಪರೀಕ್ಷೆಗಳು ಮೇ ತಿಂಗಳಿಗೆ ಮುಂದೂಡಿಕೆ
ಬೆಂಗಳೂರು, ಏ ೧೦, ರಾಜ್ಯದಲ್ಲಿ ಕಾಳ್ಗಿಚ್ಚಿನಂತೆ ಹಬ್ಬುತ್ತಿರುವ ಕೊರೊನಾ ವೈರಾಣು ಮಹಾಮಾರಿಯನ್ನು ನಿಯಂತ್ರಿಸುವ ಕ್ರಮವಾಗಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ವಿಸ್ತರಣೆ ಸಾಧ್ಯತೆಯ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ರಾಜ್ಯ ಶಿಕ್ಷಣ ಮಂಡಳಿ ಮೇ ತಿಂಗಳಿಗೆ ಮುಂದೂಡಿದೆ. ಪಿ ಯು ಸಿ ಪರೀಕ್ಷೆಯನ್ನು ಮೇ ತಿಂಗಳಿಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರಕಟಿಸಿದ್ದಾರೆ.ಲಾಕ್ ಡೌನ್ ತೆರವುಗೊಳಿಸಿ, ಜನ ಜೀವನ ಸಹಜ ಸ್ಥಿತಿಗೆ ಬಂದನಂತರ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮೇ ತಿಂಗಳಲ್ಲಿ ಪ್ರಕಟಿಸಲಾಗುವುದು. ಮಕ್ಕಳು ಪರೀಕ್ಷೆಗಾಗಿ ಸಿದ್ದಗೊಳ್ಳಲು ಸಾಧ್ಯವಾಗುವಂತೆ ಒಂದು ವಾರಕ್ಕೆ ಮುನ್ನ ಪರೀಕ್ಷಾ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಎರಡೂ ಪರೀಕ್ಷೆಗಳು ಈ ತಿಂಗಳು ಹಾಗೂ ಮುಂದಿನ ತಿಂಗಳ ಮೊದಲ ವಾರದಲ್ಲಿ ನಿಗದಿಯಂತೆ ನಡೆಯಬೇಕಿತ್ತು. ಕಳೆದ ತಿಂಗಳು ಜಾರಿಗೊಳಿಸಿರುವ ಲಾಕ್ ಡೌನ್ ಜಾರಿಯಿಂದಾಗಿ ನಿಗಧಿತ ಪರೀಕ್ಷಾ ದಿನಾಂಕಗಳನ್ನು ಸರ್ಕಾರ ಎರಡನೇ ಬಾರಿ ಮುಂದೂಡಿದೆ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಮಕ್ಕಳ ಭವಿಷ್ಯ ಅಧ್ಯಯನದ ಬಗ್ಗೆ ನಿರ್ಧರಿಸುತ್ತದೆ, ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಗುರಿ ಹೊಂದಿರುವ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುವುದು ಅತ್ಯಗತ್ಯವಾಗಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 