ಲಾಕ್ ಡೌನ್ 4.0 ಸಡಿಲಿಕೆ: ರಸ್ತೆಗಿಳಿಯಲಿವೆ ಸರ್ಕಾರಿ ಬಸ್ಸುಗಳು
ಕಲಬುರಗಿ, ಮೇ 17, ಕೊರೊನಾ ಹಾಟ್ ಸ್ಪಾಟ್ ಸೂರ್ಯ ನಗರಿ ಕಲಬುರಗಿಯಲ್ಲಿ ಲಾಕ್ಡೌನ್ 4.0 ಸಡಿಲಿಕೆಯಿಂದ ಎನ್ಈಕೆಆರ್ಟಿಸಿ ಬಸ್ಸುಗಳು ಸಂಚರಿಸಲಿವೆ.ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರ ಆರಂಭವಾಗಲಿದೆ ಎಂದು ಸಂಸ್ಥೆಯ ಎನ್ಈಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಜಹೀರಾ ನಸೀಂ ಕಲಬುರಗಿಯಲ್ಲಿ ಮಾಹಿತಿ ನೀಡಿದ್ದಾರೆ. ಲಾಕ್ಡೌನ್ ಸಡಿಲಿಕೆಯಿಂದ ಸಂಸ್ಥೆಯ 4888 ಬಸ್ಸುಗಳು ರಸ್ತೆಗಿಳಿಯಲಿವೆ. ಇನ್ನು, ಲಾಕ್ಡೌನ್ನಿಂದ ಎನ್ಈಕೆಆರ್ಟಿಸಿ ಸಾರಿಗೆ ಸಂಸ್ಥೆಗೆ 313 ಕ್ಕೂ ಅಧಿಕ ಕೋಟಿ ರೂ. ನಷ್ಟ ಕಂಡಿದ್ದು, ಸಂಸ್ಥೆ, ಸಿಬ್ಬಂದಿಗಳ ವೇತನಕ್ಕಾಗಿ ಸರ್ಕಾರದ ಮೊರೆ ಹೋಗಿವೆ. ಸರ್ಕಾರದ ನಿರ್ದೇಶನ ನಂತರ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳನ್ನೊಳಗೊಂಡಿರುವ ಎನ್ಈಕೆಆರ್ಟಿಸಿ ಸಾರಿಗೆ ಸಂಸ್ಥೆ ಬಸ್ಸುಗಳ ಸಂಚಾರ ಆರಂಭವಾಗಲಿವೆ.ಇನ್ನು, ಬಸ್ಸುಗಳ ಓಡಾಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಚಾಲಕ ಹಾಗೂ ನಿರ್ವಾಹಕರಿಗೆ ಮಾಸ್ಕ್ ಮತ್ತು ಸ್ಯಾನಿಟರಿ ವಿತರಣೆ ಮಾಡಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 