ಲಾಕ್ ಡೌನ್ 4.0 ಸಡಿಲಿಕೆ: ರಸ್ತೆಗಿಳಿಯಲಿವೆ ಸರ್ಕಾರಿ ಬಸ್ಸುಗಳು
ಕಲಬುರಗಿ, ಮೇ 17, ಕೊರೊನಾ ಹಾಟ್ ಸ್ಪಾಟ್ ಸೂರ್ಯ ನಗರಿ ಕಲಬುರಗಿಯಲ್ಲಿ ಲಾಕ್ಡೌನ್ 4.0 ಸಡಿಲಿಕೆಯಿಂದ ಎನ್ಈಕೆಆರ್ಟಿಸಿ ಬಸ್ಸುಗಳು ಸಂಚರಿಸಲಿವೆ.ಜಿಲ್ಲೆಯಲ್ಲಿ ಬಸ್ಸುಗಳ ಸಂಚಾರ ಆರಂಭವಾಗಲಿದೆ ಎಂದು ಸಂಸ್ಥೆಯ ಎನ್ಈಕೆಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಜಹೀರಾ ನಸೀಂ ಕಲಬುರಗಿಯಲ್ಲಿ ಮಾಹಿತಿ ನೀಡಿದ್ದಾರೆ. ಲಾಕ್ಡೌನ್ ಸಡಿಲಿಕೆಯಿಂದ ಸಂಸ್ಥೆಯ 4888 ಬಸ್ಸುಗಳು ರಸ್ತೆಗಿಳಿಯಲಿವೆ. ಇನ್ನು, ಲಾಕ್ಡೌನ್ನಿಂದ ಎನ್ಈಕೆಆರ್ಟಿಸಿ ಸಾರಿಗೆ ಸಂಸ್ಥೆಗೆ 313 ಕ್ಕೂ ಅಧಿಕ ಕೋಟಿ ರೂ. ನಷ್ಟ ಕಂಡಿದ್ದು, ಸಂಸ್ಥೆ, ಸಿಬ್ಬಂದಿಗಳ ವೇತನಕ್ಕಾಗಿ ಸರ್ಕಾರದ ಮೊರೆ ಹೋಗಿವೆ. ಸರ್ಕಾರದ ನಿರ್ದೇಶನ ನಂತರ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳನ್ನೊಳಗೊಂಡಿರುವ ಎನ್ಈಕೆಆರ್ಟಿಸಿ ಸಾರಿಗೆ ಸಂಸ್ಥೆ ಬಸ್ಸುಗಳ ಸಂಚಾರ ಆರಂಭವಾಗಲಿವೆ.ಇನ್ನು, ಬಸ್ಸುಗಳ ಓಡಾಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಚಾಲಕ ಹಾಗೂ ನಿರ್ವಾಹಕರಿಗೆ ಮಾಸ್ಕ್ ಮತ್ತು ಸ್ಯಾನಿಟರಿ ವಿತರಣೆ ಮಾಡಲಾಗಿದೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 