ಲಾಕ್ ಡೌನ್ ತೆರವು ಏಕಪಕ್ಷೀಯ ತೀರ್ಮಾನ ಸಲ್ಲ : ಚಿದಂಬರಂ
ನವದೆಹಲಿ, ಏಪ್ರಿಲ್ 8,ಲಾಕ್ಡೌನ್ ಕೊನೆಗಾಣಿಸುವ ಮುನ್ನ, ಹಾಗೂ ಇದರ ಬಗ್ಗೆ ಕೇಂದ್ರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲ ರಾಜ್ಯಗಳ ಸಲಹೆ , ಅಭಿಪ್ರಾಯ ಕೇಳಬೇಕು ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಒತ್ತಾಯ ಮಾಡಿದ್ದಾರೆ. ಈ ಮೊದಲು ಲಾಕ್ಡೌನ್ ಪರ ವಾದಿಸಿದ್ದ ಅವರು ಈಗ ಕೇಂದ್ರಕ್ಕೆ ಈ ಸಲಹೆ ಕೊಟ್ಟಿದ್ದಾರೆ. ಬಡವರಿಗೆ ಸರ್ಕಾರ ನಗದು ಸಹಾಯ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ .ಏಪ್ರಿಲ್ 14 ರ ನಂತರ ಲಾಕ್ಡೌನ್ ಅನ್ನು ತೆಗೆದುಹಾಕುವುದರ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಸಮಾಲೋಚಿಸಬೇಕು ಏಕ ಪಕ್ಷೀಯ ತೀರ್ಮಾನ ಬೇಡ ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಮನವಿ ಎಂದು ಚಿದಂಬರಂ ಟ್ವೀಟ್ ನಲ್ಲಿ ತಿಳಿಸಿದ್ದಾರೆ.ಸರ್ಕಾರದಿಂದ ಒಂದು ರೂಪಾಯಿಯನ್ನು ಸಹ ಪಡೆಯದ ಸಾಕಷ್ಟು ಬಡವರಿದ್ದಾರೆ ಅವರಿಗೂ ಅನ್ಯಾಯವಾಗಬಾರದು ಎಂದೂ ಹೇಳಿದ್ದಾರೆ .
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 