ಲಾಕ್ಡೌನ್ ಎಫೆಕ್ಟ್: ಚೆಕ್ಪೋಸ್ಟ್ನಲ್ಲೇ ಹಸೆಮಣೆ ಏರಿದ ಜೋಡಿ
ಚಾಮರಾಜನಗರ, ಮೇ 22,ಲಾಕ್ ಡೌನ್ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ಜೋಡಿಯೊಂದು ಗಡಿ ಭಾಗದ ಚೆಕ್ ಪೋಸ್ಟ್ ನಲ್ಲಿಯೇ ವಿವಾಹ ಬಂಧನಕ್ಕೆ ಒಳಗಾದ ಅಪರೂಪದ ಘಟನೆಯೊಂದು ಕರ್ನಾಟಕ - ತಮಿಳುನಾಡು ಗಡಿ ಪುಣಜನೂರಿನಲ್ಲಿ ನಡೆದಿದೆ.ಕೊಡಗು ಜಿಲ್ಲೆಯ ಗೋಣಿಕೊಪ್ಪದ ಹೊಂಬಾಳಯ್ಯ, ತ್ರಿವೇಣಿ ದಂಪತಿ ಪುತ್ರಿ ಯಶಸ್ಮಿತ ಹಾಗೂ ತಮಿಳುನಾಡಿನ ಮೆಟ್ಟುಪಾಳ್ಯಂ ನಿವಾಸಿ ಶಕ್ತಿವೇಲು-ಲತಾ ದಂಪತಿ ಪುತ್ರ ಸತೀಶ್ ಕುಮಾರ್ ಗಡಿ ದಾಟದೆ ಮದುವೆ ಮಾಡಿಕೊಂಡಿದ್ದಾರೆ.
ಕೊರೊನಾ ಲಾಕ್ಡೌನ್ 4.0 ನಲ್ಲಿ ಅಂತರ್ ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಗಡಿಯಲ್ಲಿರುವ ಗಣೇಶ ಗುಡಿಯಲ್ಲಿ ವರ ತಮಿಳುನಾಡು ಗಡಿದಾಟದೆ, ವಧು ಕರ್ನಾಟಕ ಗಡಿ ದಾಟದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅಂತರ್ ರಾಜ್ಯ ಪ್ರವೇಶ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗಡಿಗೆ ಬಂದ ಜೋಡಿ ಮತ್ತು ಪೋಷಕರು ಗಡಿನಲ್ಲೇ ವಿವಾಹ ನಡೆಸಿದ್ದಾರೆ.
ಬಳಿಕ ತಮ್ಮ ತಮ್ಮ ತವರಿಗೆ ತೆರಳಿದ್ದಾರೆ. ಈ ಮದುವೆಗೆ ಚೆಕ್ ಪೋಸ್ಟ್ ನ ಕರ್ತವ್ಯ ನಿರತ ಸಿಬ್ಬಂದಿ ಸಾಕ್ಷಿಯಾದರು.ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ನಿಗದಿ ಪಡಿಸಿದ ದಿನಾಂಕ ದಂದು ಸಾಂಸಾರಿಕ ಜೀವನಕ್ಕೆ ಈ ಇಬ್ಬರು ಅಂತರ್ ರಾಜ್ಯ ಜೋಡಿಗಳು ಕಾಲಿಟ್ಟು ಎಲ್ಲರ ಗಮನ ಸೆಳೆದಿದ್ದಾರೆ. ಲಾಕ್ಡೌನ್ ಹಿಂಪಡೆದ ನಂತರ ಮಧುಮಗಳು ವರನ ಮನೆಗೆ ಬರುವ ನಿರೀಕ್ಷೆ ಇದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 