ಕೋವಿಡ್ 19 ನಿಯಂತ್ರಿಸುವಲ್ಲಿ ಲಾಕ್ ಡೌನ್ ವಿಫಲ : ರಾಹುಲ್ ಗಾಂಧಿ
ನವದೆಹಲಿ, ಮೇ 26, ಕೊರೋನಾ ಸೋಂಕು ಪಸರಿಸುವಿಕೆ ತಡೆಯುವಲ್ಲಿ ನಾಲ್ಕು ಹಂತದ ಲಾಕ್ಡೌನ್ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದು, ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನ್ನ ಮುಂದಿನ ಕಾರ್ಯತಂತ್ರಗಳ ಬಗ್ಗೆ ಮಾಹಿತಿ ನೀಡುವಂತೆ ಒತ್ತಾಯಿಸಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ಲಾಕ್ಡೌನ್ ವಿಫಲವಾಗಿದೆ. ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವಾಗ ಲಾಕ್ಡೌನ್ ತೆರವುಗೊಳಿಸಿರುವ ಏಕೈಕ ದೇಶ ಭಾರತ ಎಂದು ವ್ಯಂಗ್ಯವಾಡಿದ್ದಾರೆ. ವಿಫಲವಾದ ಲಾಕ್ಡೌನ್ ಫಲಿತಾಂಶವನ್ನು ಭಾರತ ಎದುರಿಸುತ್ತಿದೆ. 21 ದಿನಗಳಲ್ಲಿ ಕೋವಿಡ್ -19 ರೋಗವನ್ನು ಬಡಿದೋಡಿಸುತ್ತೇವೆ ಎಂದು ಪ್ರಧಾನಿ ಹೇಳಿದ್ದರು. ಆದರೆ ಅರವತ್ತು ದಿನಗಳ ನಂತರವೂ ಸೋಂಕು ಹೆಚ್ಚುತ್ತಿದೆ. ರೋಗವು ಹೆಚ್ಚಾಗುತ್ತಿರುವಾಗ ಎನ್ಡಿಎ ಸರ್ಕಾರ ಏನು ಮಾಡಲು ಯೋಜಿಸುತ್ತಿದೆ ಎಂಬುದರ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.ಸರ್ಕಾರವು ಮುಂದೆ ಏನು ಮಾಡಲು ಯೋಜಿಸುತ್ತಿದೆ ಎಂಬುದರ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಬೇಕು. ಅಲ್ಲದೆ ಆರ್ಥಿಕ ಚೇತರಿಕೆಗೆ ಕ್ರಮ ಕೈಗೊಳ್ಳಬೇಕು, ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗೆ ಸಹಾಯ ಮಾಡಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಇತರ ದೇಶಗಳು ನಮ್ಮ ಬಗ್ಗೆ ಏನು ಯೋಚಿಸುತ್ತವೆ ಎಂಬುದರ ಬಗ್ಗೆ ನಾವು ಚಿಂತಿಸಬಾರದು. ನಾವು ದೇಶದ ಆತ್ಮಶಕ್ತಿಯನ್ನು ರಕ್ಷಿಸಬೇಕಾಗಿದೆ "ಎಂದಿರುವ ರಾಹುಲ್, ದಿನಗೂಲಿಗಳು, ವಲಸೆ ಕಾರ್ಮಿಕರ ಹಿತಾಸಕ್ತಿಗಳನ್ನು ಸರ್ಕಾರ ಕಡೆಗಣಿಸಿದೆ. ಕೇಂದ್ರದ ನೆರವಿಲ್ಲದೆ, ಕೊರೋನಾ ಬಿಕ್ಕಟ್ಟು ಎದುರಿಸಲು ರಾಜ್ಯಗಳು ಒಂಟಿಯಾಗಿ ಹೋರಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 