ಲಾಕ್ಡೌನ್ ನಿಯಮ ಉಲ್ಲಂಘನೆ: 500 ರೂ. ದಂಡ ತೆತ್ತ ಕ್ರಿಕೆಟಿಗ
ಹೊಸದಿಲ್ಲಿ: ಕೊರೊನಾ ವೈರಸ್ ಇಂದು ವಿಶ್ವದಾದ್ಯಂತ ಹಬ್ಬಿದ್ದು ಸೋಂಕು ಹೆಚ್ಚು ಹರಡದಂತೆ ತಡೆಯುವ ಉದ್ದೇಶದಿಂದ ಇಂದು ಬಹುತೇಕ ಎಲ್ಲ ರಾಷ್ಟ್ರಗಳು ಲಾಕ್ಡೌನ್ ಮೊರೆ ಹೋಗಿವೆ. ಭಾರತದಲ್ಲೂ ಏಪ್ರಿಲ್ 14ರವರೆಗೆ 21 ದಿನಗಳ ಲಾಕ್ಡೌನ್ ಜಾರಿಯಲ್ಲಿದೆ. ಇನ್ನು ಈ ಲಾಕ್ಡೌನ್ ಅವಧಿಯನ್ನು ಮುಂದಿನ 2 ತಿಂಗಳವರೆಗೆ ವಿಸ್ತರಿಸುವ ಕುರಿತಾಗಿಯೂ ಚಿಂತನೆ ನಡೆದಿದೆ.
ಭಾರತದಲ್ಲಿ ಇಂದು ಕೋವಿಡ್-19 ಸೋಂಕಿಗೆ ಸಿಲುಕಿದವರ ಸಂಖ್ಯೆ 6 ಸಾವಿರದ ಗಡಿ ದಾಟಿಯಾಗಿದೆ. ಆದ್ದರಿಂದಲೇ ಜನಸಾಮಾನ್ಯರು ರಸ್ತೆಗಳಲ್ಲಿ ಅಡ್ಡಾಡುವುದನ್ನು ತಪ್ಪಿಸಲು ಪೊಲೀಸರು ಹಗಲು ರಾತ್ರಿ ಪ್ರಯತ್ನ ನಡೆಸುತ್ತಿದ್ದಾರೆ.ಆದರೆ, ಟೀಮ್ ಇಂಡಿಯಾದ ಅವಕಾಶ ವಂಚಿತ ಆಟಗಾರ ಆಲ್ರೌಂಡರ್ ರಿಷಿ ಧವನ್ ಬೇಜವಾಬ್ದಾರಿತನ ಮೆರೆದು ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡುವ ಮೂಲಕ 500 ರೂ. ದಂಡ ತೆತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.ರಣಜಿ ಕ್ರಿಕೆಟ್ನಲ್ಲಿ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಪರ ಆಡುವ ಸ್ಟಾರ್ ಆಲ್ರೌಂಡರ್ ಲಾಕ್ಡೌನ್ ನಡುವೆ ಪ್ರತ್ಯೇಕ ಪಾಸ್ ಇಲ್ಲದೆ ಬ್ಯಾಂಕ್ಗೆ ತೆರಳುತ್ತಿರುವಾಗ ಪೊಲೀಸರಿಗೆ ಸಿಕ್ಕಿಬಿದ್ದು 500 ರೂ. ದಂಡ ತೆತ್ತಿದ್ದಾರೆ. ತಮ್ಮ ಖಾಸಗಿ ಕಾರ್ ಬಳಕೆ ಮಾಡಿ ಆಚೆ ಬಂದಿದ್ದ ಧವನ್ ಸ್ಥಳದಲ್ಲೇ ದಂಡ ಪಾವತಿಸಿದ್ದಾರೆ ಎಂದು ವರದಿಯಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 