ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 33ರಿಂದ 37ಕ್ಕೆ ಹೆಚ್ಚಿಸುವ ಮಸೂದೆಗೆ ಲೋಕಸಭೆ ಅಂಗೀಕಾರ
Lok Sabha Passes Bill to Increase Supreme Court Judges’ Strength from 33 to 37
ನವದೆಹಲಿ, ಆ. 3 : ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ಮಂಜೂರಾದ ಸಂಖ್ಯೆಯನ್ನು ಹಾಲಿ 33ರಿಂದ 37ಕ್ಕೆ ಹೆಚ್ಚಿಸುವ ಉದ್ದೇಶದ ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ, 2026ಕ್ಕೆ ಲೋಕಸಭೆ ಸೋಮವಾರ ಅಂಗೀಕಾರ ನೀಡಿತು. ಈ ಸಂಖ್ಯೆಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಹೊರತುಪಡಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊರಡಿಸಿದ್ದ ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಅಧ್ಯಾದೇಶ, 2026ರ ಬದಲಿಗೆ ಈ ಮಸೂದೆ ಜಾರಿಗೆ ಬರಲಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಜುಲೈ 20ರಂದು ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದರು.
ಮಧ್ಯಾಹ್ನ 2 ಗಂಟೆಗೆ ಎರಡನೇ ಬಾರಿ ಮುಂದೂಡಿಕೆಯ ಬಳಿಕ ಸದನ ಪುನರಾರಂಭಗೊಂಡಾಗ ಮಸೂದೆಯನ್ನು ಮಂಡಿಸಿದ ಮೇಘವಾಲ್, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಬಾಕಿ ಪ್ರಕರಣಗಳ ನಿವಾರಣೆಗೆ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ಮುಖ್ಯ ನ್ಯಾಯಮೂರ್ತಿಗಳಿಗೆ ಸಂವಿಧಾನ ಪೀಠಗಳನ್ನು ಹೆಚ್ಚು ಬಾರಿ ರಚಿಸಲು ಸಾಧ್ಯವಾಗಲಿದ್ದು, ಸಾಮಾನ್ಯ ಪ್ರಕರಣಗಳ ತ್ವರಿತ ವಿಲೇವಾರಿ ಮತ್ತು ನ್ಯಾಯಾಂಗದ ಒಟ್ಟಾರೆ ಕಾರ್ಯಕ್ಷಮತೆ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಮಸೂದೆಯ ಉದ್ದೇಶ ಮತ್ತು ಕಾರಣಗಳ ಹೇಳಿಕೆಯ ಪ್ರಕಾರ, ಹೆಚ್ಚುವರಿ ನ್ಯಾಯಮೂರ್ತಿಗಳ ಸಂಖ್ಯೆಯಿಂದ ಪ್ರಕರಣಗಳ ನಿರ್ವಹಣೆ ಸುಧಾರಿಸಲಿದ್ದು, ತೀರ್ಪು ನೀಡುವ ಪ್ರಕ್ರಿಯೆಯಲ್ಲಿನ ವಿಳಂಬವನ್ನು ಕಡಿಮೆ ಮಾಡಲು ಸಹಾಯವಾಗಲಿದೆ.
ಇದೇ ವೇಳೆ, ಸಂಸತ್ತಿನ ಮುಂಗಾರು ಅಧಿವೇಶನದ 11ನೇ ದಿನವೂ ಪ್ರತಿಭಟನೆ ಮತ್ತು ಗದ್ದಲ ಮುಂದುವರಿಯಿತು. ಪ್ರತಿಪಕ್ಷ ಸದಸ್ಯರ ಪ್ರತಿಭಟನೆಯಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪಗಳು ಹಲವು ಬಾರಿ ಅಸ್ತವ್ಯಸ್ತಗೊಂಡವು.
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ಯುವಕರ ಮೇಲೆ ಪೆಲ್ಲೆಟ್ ಗನ್ ಬಳಕೆ ಹಾಗೂ ಅತಿಯಾದ ಬಲಪ್ರಯೋಗದ ಆರೋಪಗಳಿಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು. ಅಲ್ಲದೆ, ಅಯೋಧ್ಯೆ ರಾಮ ಮಂದಿರದ ದೇಣಿಗೆ ಹಣ ಕಳವು ಆರೋಪದ ವಿಚಾರವನ್ನೂ ಪ್ರತಿಪಕ್ಷಗಳು ಪ್ರಸ್ತಾಪಿಸಿದವು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 