ಬಡವರ ಹಿತ ಕಾಪಾಡುವ ಚಿಟ್ ಫಂಡ್ಸ್ (ತಿದ್ದುಪಡಿ) ಮಸೂದೆಗೆ ಲೋಕಸಭೆ ಅಸ್ತು
parliament
ನವದೆಹಲಿ, ನವೆಂಬರ್ 20: ಚಿಟ್ ಫಂಡ್ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡುವ ಬಡವರು, ಮತ್ತು ಮಧ್ಯಮ ವರ್ಗದ ಹಿತಾಸಕ್ತಿ ಕಾಪಾಡುವ 2019 ರ ಚಿಟ್ ಫಂಡ್ಸ್ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಬುದವಾರ ಧ್ವನಿ ಮತದಿಂದ ಅಂಗೀಕರಿಸಿದೆ.
ಮಸೂದೆ ಕುರಿತ ಚರ್ಚೆಗೆ ಉತ್ತರಿಸಿದ ಹಣಕಾಸು ಸಚಿವ ಅನುರಾಗ್ ಠಾಕೂರ್, ಬಡವರ ಹಿತ ಮತ್ತು ಅವರು ಮೋಸ ಹೋಗದಂತೆ ತಡೆಯುವುದೇ ಈ ಮಸೂದೆಯ ಉದ್ದೇಶವಾಗಿದೆ ಎಂದು ಹೇಳಿದರು.
ಮುಂಬರುವ ವರ್ಷದಲ್ಲಿ 15000 ಕ್ಕೂ ಹೆಚ್ಚು ಹೂಡಿಕೆದಾರರ ಜಾಗೃತಿ ಕಾರ್ಯಕ್ರಮಗಳನ್ನು ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದರು. ಹೆಚ್ಚಿನ ಬಡ್ಡಿ ಆಸೆಗೆ ಜನರು ಮೋಸ ಹೋಗದಂತೆ ತಡೆಯುವ ಉದ್ಧೇಶ ಸಹ ಇದರಲ್ಲಿ ಅಡಗಿದೆ ಎಂದು ಸಚಿವರು ಹೇಳಿದರು.
ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಸಂಸದರ ಸಹಕಾರವು ಬಹಳ ಮುಖ್ಯವಾಗಿದೆ ಎಂದು ಅವರು ಮನವಿ ಮಾಡಿದರು.
ಚಂದಾದಾರ ಆಧಾರಿತ ಚಿಟ್ ಫಂಡ್ ಕಾನೂನುಬದ್ಧವಾಗಿದೆ ಚಿಟ್ ಫಂಡ್ ನೋಂದಾಯಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ.
ಪ್ರಧಾನ್ ಮಂತ್ರಿ ಜನ ಧನ್ ಯೋಜನೆ (ಪಿಎಂಜೆಡಿವೈ), ಯುಪಿಐ ಪಾವತಿ, ಡಿಜಿಟಲ್ ವಹಿವಾಟು ಮತ್ತು ರುಪೇ ಡೆಬಿಟ್ ಕಾರ್ಡ್ಗಳ ಬಗ್ಗೆಯೂ ಸಚಿವರು ಉಲ್ಲೇಖಿಸಿದ್ದು, ಗರಿಷ್ಠ ಸಂಖ್ಯೆಯ ಜನರನ್ನು ಬ್ಯಾಂಕ್ ಖಾತೆಗಳ ಮೂಲಕ ಆರ್ಥಿಕ ಪಾಲುದಾರಿಕೆ ವ್ಯಾಪ್ತಿಗೆ ತರಲಾಗುತ್ತಿದೆ ಎಂದರು .
ಚರ್ಚೆಯಲ್ಲಿ ಪಾಲ್ಗೊಂಡ ಸೌಗತಾ ರಾಯ್ ಮಸೂದೆ ತರುವಲ್ಲಿ ಸರಕಾರದ ದ ವಿಳಂಬ ನೀತಿಯನ್ನೂ ಪ್ರಶ್ನೆ ಮಾಡಿ, ಕಳೆದ ಲೋಕಸಭೆಯಲ್ಲಿಯೂ ಈ ಮಸೂದೆಯನ್ನು ಮಂಡಿಸಿ ಹಣಕಾಸು ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ ಎಂದು ಅವರು ಅಸಮಾಧಾನ ಹೊರಹಾಕಿದರು.
ಸಮಿತಿ 2018 ರ ಆಗಸ್ಟ್ನಲ್ಲಿ ತನ್ನ ಶಿಫಾರಸುಗಳನ್ನು ನೀಡಿದ್ದರೂ ತಿದ್ದುಪಡಿಗಳೊಂದಿಗೆ ಹೊಸ ಮಸೂದೆ ತರಲು ಕೇಂದ್ರ ಸರ್ಕಾರಕ್ಕೆ ಒಂದು ವರ್ಷಕ್ಕೂ ಹೆಚ್ಚು ಸಮಯ ತೆಗೆದುಕೊಂಡದ್ದು ಏಕೆ? ಬಡವರ ಹಿತ ಕಾಪಾಡುವಲ್ಲಿ ಈ ಧೋರಣೆ ? ಎಂದು ರಾಯ್ ತರಾಟೆಗೆ ತೆಗೆದುಕೊಡರು. ಬಿಜೆಪಿ ಸದಸ್ಯರಾದ ರಾಜೀವ್ ಪ್ರತಾಪ್ ರೂಡಿ, ಅನುರಾಗ್ ಶರ್ಮಾ ಮತ್ತು ಮೀನಾಕ್ಷಿ ಲೇಖಿ ಚರ್ಚೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 