ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ
Lokayukta public relations meeting on May 14
ಗದಗ 07: ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಮೇ 14 ರಂದು ಬುಧವಾರದಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯ ವರೆಗೆ “ಪುರಸಭೆ ಕಛೇರಿ ಗಜೇಂದ್ರಗಡ ದಲ್ಲಿ” ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರಿ್ಡಸಲಾಗಿದ್ದು, ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ಅಹವಾಲುಗಳನ್ನು ಸ್ವೀಕರಿಸಲಾಗುವುದು.
ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು, ಅಹವಾಲುಗಳನ್ನು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಯಾವುದೇ ಸರಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸುವ ಬಗ್ಗೆ, ಸರಕಾರಿ ಅಧಿಕಾರಿಗಳು ಸರಕಾರದ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಉದ್ದೇಶ ಪೂರ್ವಕ ತಾರತಮ್ಯ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸುವ ಬಗ್ಗೆ.
ಸರಕಾರದ ಯೋಜನೆಗಳ ಅನುಷ್ಟಾನದಲ್ಲಿ ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗಪಡಿಸಿದ ದೂರುಗಳ ಬಗ್ಗೆ ಲಿಖಿತ ದೂರನ್ನು ದಾಖಲಿಸುವ ಬಗ್ಗೆ, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯದೊಳಗೆ ಮಾಡಿಕೊಡದೆ, ಅಕ್ರಮ ಸಂಭಾವನೆ (ಲಂಚದ ಹಣ)ಯ ಸಲುವಾಗಿ ಅನಗತ್ಯ ವಿಳಂಬ ಮಾಡುತ್ತಿದ್ದರೆ ಲಿಖಿತ ದೂರವನ್ನು ದಾಖಲಿಸುವ ಬಗ್ಗೆ. ಯಾವುದೇ ಸರಕಾರಿ ಅಧಿಕಾರಿಯು ತಾನು ಕರ್ತವ್ಯ ನಿರ್ವಹಿಸಲು ನಿಯೋಜಿಸಿದ ಕರ್ತವ್ಯವನ್ನು ನಿರ್ವಹಿಸುವಲ್ಲಿ ದುರಾಡಳಿತ ಪ್ರದರ್ಶಿಸುವಂತಹ ಅಧಿಕಾರಿಗಳ ಮೇಲೆ ಲಿಖಿತ ದೂರನ್ನು ದಾಖಲಿಸುವ ಬಗ್ಗೆ. ಪ್ರಪತ್ರ 1 ಮತ್ತು 2 ರಲ್ಲಿ ಅಫಿಡೆವಿಟ್ನೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ದೂರನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ ಆರಕ್ಷಕ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 