ಓಲ್ಡ್ ಈಸ್ ಗೋಲ್ಡ್ ಪೆನಲ್ ದಿಂದ ಅಬ್ಬರದ ಪ್ರಚಾರ
Loud promotion from the Old is Gold panel
ತಾಳಿಕೋಟಿ ಸಹಕಾರಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ
ತಾಳಿಕೋಟಿ 15: ಪಟ್ಟಣದ ಪ್ರತಿಷ್ಠಿತ ದಿ.ತಾಳಿಕೋಟಿ ಸಹಕಾರಿ ಬ್ಯಾಂಕ್ ನ 13 ನಿರ್ದೇಶಕರ ಸ್ಥಾನಗಳಿಗೆ ಜನವರಿ 19ರಂದು ನಡೆಯಲಿರುವ ಚುನಾವಣೆಗೆ ಓಲ್ಡ್ ಈಸ್ ಗೋಲ್ಡ್ ಪೆನಲ್ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದರು.
ಮಂಗಳವಾರ ಪಟ್ಟಣದ ಸಗರಪೇಟ, ಉಪ್ಪಾರ ಓಣಿ ಹಾಗೂ ನಾಗರಕಲ್ ಬಡಾವಣೆಯಲ್ಲಿ ಪೆನಲ್ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರಿ ಮತದಾರ ಸದಸ್ಯರ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಪೆನಲ್ ಅಭ್ಯರ್ಥಿ ಮುರಿಗೆಪ್ಪ ಸರಶೆಟ್ಟಿ ಅವರು ನಾವು ಕಳೆದ ಕೆಲವು ಅವಧಿಗಳಿಂದ ಈ ಬ್ಯಾಂಕಿನ ಆಡಳಿತ ಮಂಡಳಿಯಲ್ಲಿದ್ದು ಇದರ ಅಭಿವೃದ್ಧಿಗಾಗಿ ಪ್ರಮಾಣಿಕವಾಗಿ ಕೆಲಸ ಮಾಡಿದ್ದೇವೆ. ಕೆಲವರು ಅಪಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ ಇದಕ್ಕೆ ಯಾವುದೇ ಆಧಾರವಿಲ್ಲ, ಬ್ಯಾಂಕನ್ನು ಇನ್ನಷ್ಟು ಅಭಿವೃದ್ಧಿಯಡೆಗೆ ತೆಗೆದುಕೊಂಡು ಹೋಗುಲು ನಾವು ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಮತದಾರ ಬಾಂಧವರು ಮತ್ತೇ ನಮ್ಮ ಪೆನಲ್ ನ ಎಲ್ಲ ಅಭ್ಯರ್ಥಿಗಳನ್ನು ಗೆಲ್ಲಿಸಿ ಸೇವೆಯನ್ನು ಮಾಡುವ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಈ ವೇಳೆ ಅಭ್ಯರ್ಥಿಗಳಾದ ದತ್ತಾತ್ರೇಯ ಹೆಬಸೂರ,ಕಾಶಿನಾಥ ಸಜ್ಜನ, ಎಂ.ಎಸ್.ಸರಶಟ್ಟಿ, ಬಾಬು ಹಜೇರಿ, ನಾಗಪ್ಪ ಚಿನಗುಡಿ, ಚಿಂತಪ್ಪಗೌಡ ಯಾಳಗಿ, ಬಿಳೇಭಾವಿ ಈಶ್ವರ್ಪ, ದ್ಯಾಮನಗೌಡ ಪಾಟೀಲ, ಸುರೇಶ ಪಾಟೀಲ, ರಾಮಣ್ಣ ಕಟ್ಟಿಮನಿ, ಸಂಜೀವಪ್ಪ ಬರದೇನಾಳ, ಗಿರಿಜಾಬಾಯಿ ಕೊಡಗನೂರ, ಶೈಲಾ ಬಡದಾಳಿ ಪುರಸಭೆ ಸದಸ್ಯ ವಾಸು ಹೆಬಸೂರ, ರಾಜು ಸಜ್ಜನ, ಪ್ರಭು ಬಿಳೇಭಾವಿ, ಈರಣ್ಣ ಸಜ್ಜನ, ಶಿವಣ್ಣ ಬಬಲೇಶ್ವರ, ಶ್ರೀಶೈಲ್ ಸಜ್ಜನ, ಬಡಾವಣೆ ನಿವಾಸಿಗಳಾದ ಅಶೋಕ ಜಾಲವಾದಿ, ಈರಯ್ಯ ಹಿರೇಮಠ, ಮಲ್ಲು ಮೇಟಿ, ಅಶೋಕ ಚಿನಗುಡಿ, ಅಮರೇಶ ಗೋನಾಳ, ರಾಜಶೇಖರ ಬಬಲೇಶ್ವರ, ಸುರೇಶ ಸರೂರ,ರಮೇಶ ಬಿಳೇಭಾವಿ ಹಾಗೂ ಬೆಂಬಲಿಗರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 