ಲವ್ ಜಿಹಾದ್, ಪಾಲಕರು ಮಕ್ಕಳ ಬಗ್ಗೆ ಇರಲಿ ಜಾಗೃತಿ: ಶೇಕರಗೌಡ
Love Jihad, parents should be aware of their children: Shekar Gowda
ಲೋಕದರ್ಶನ ವರದಿ
ದೇವರಹಿಪ್ಪರಗಿ 14 : ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ ಪೋಷಕರು ತಮ್ಮ ಹೆಣ್ಣು ಮಕ್ಕಳ ಕಡೆಗೆ ವಿಶೇಷ ಗಮನ ಹರಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಧರ್ಮಚಾರ್ಯ ಸಂಪರ್ಕ ಸಹ ಪ್ರಮುಖರಾದ ಶೇಖರಗೌಡ ಹರನಾಳ ಹೇಳಿದರು. ಪಟ್ಟಣದಲ್ಲಿ ಶನಿವಾರದಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು,ಪ್ರತಿ ವರ್ಷ 60 ಸಾವಿರಕ್ಕಿಂತ ಹೆಚ್ಚು ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗುತ್ತಿದ್ದು ಅಲ್ಲದೆ ಮತಾಂತರಕ್ಕೆ ಒಳಗಾಗುತ್ತಿದ್ದಾರೆ ಈ ವಿಷಯ ಇಡೀ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಘಂಟೆ ಇದನ್ನು ಅರಿತು ನಮ್ಮ ನಮ್ಮ ಮನೆಯಲ್ಲಿಯೇ ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡುವುದು ತಂದೆ ತಾಯಿಯರ ಕರ್ತವ್ಯವಾಗಿದೆ.
ಹಾಗೆ ಮೋಸದ ಮತಾಂತರಕ್ಕೆ ಒಳಗಾಗದಂತೆ ಎಚ್ಚರ ವಹಿಸಬೇಕು ಹಾಗೂ ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬಂದಿವೆ ಮತ್ತು ಬರುತ್ತಿದೆ ಕಾರಣ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಹಿಂದೂ ಹೆಣ್ಣು ಮಕ್ಕಳೇ ಅತಿ ಹೆಚ್ಚು ಲವ್ ಜಿಹಾದಿಗೆ ಬಲಿಯಾಗುತ್ತಿದ್ದಾರೆ ಏಕೆಂದರೆ ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಮೇಲೆ ನಮ್ಮ ಹಿಂದೂ ಹೆಣ್ಣು ಮಕ್ಕಳಿಗೆ 18 ಪ್ರಾಯ ತುಂಬುತ್ತದೆ ಮದುವೆ ವಿಚಾರಯಾಗಿ ಸ್ವತಂತ್ರ ನಿರ್ದಾರ ತೆಗೆದುಕೊಳ್ಳುವ ಹಕ್ಕು ಅವರ ಕೈಯಲ್ಲಿ ಇರುತ್ತದೆ ಅದಕ್ಕಾಗಿಯೇ ಪಿಯುಸಿ ಮುಗಿಸಿದ ವಿದ್ಯಾರ್ಥಿನಿಯರೇ ಹೆಚ್ಚಿಗೆ ಲವ್ ಜಿಹಾದಿಗೆ ಒಳಗಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಾರೆ ಆದ್ದರಿಂದ ಪೋಷಕರು ಎಚ್ಚರ ವಹಿಸಬೇಕಿದೆ ಇಂತಹ ಮತಾಂತರದ ಹೆಸರಿನಲ್ಲಿ ನಡೆಯುವ ಪ್ರಕರಣದಲ್ಲಿ ಸಿಲುಕಿಕೊಂಡರೆ ಅಂತ ಹೆಣ್ಣು ಮಕ್ಕಳನ್ನು ಹೊರಗೆ ತರುವುದು ಅಸಾಧ್ಯ ಮತ್ತು ಮತಾಂತರ ಭೀಕರತೆ ಬಗ್ಗೆ ನಮ್ಮ ಹಿಂದೂ ಹೆಣ್ಣು ಮಕ್ಕಳಿಗೆ ಅರ್ಥವಾಗಬೇಕಾದರೆ ಈಗ ಬಂದಿರುವ ಕೇರಳ ಸ್ಟೋರಿ ಭಾಗ-2 ಚಲನ ಚಿತ್ರ ತೋರಿಸಿ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಲವಾರು ಜನ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 