ಲಾಲು ಪೆರೋಲ್ ಮುಂದುವರಿಕೆಗೆ ಹೈಕೋಟರ್್ ನಕಾರ
ಪಾಟ್ನಾ 24: ಇನ್ನೂ ಮೂರು ತಿಂಗಳ ಕಾಲ ಜಾಮೀನನ್ನು ಮುಂದುವರಿಸಬೇಕೆಂದು ಕೋರಿದ್ದ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ)ದ ವರಿಷ್ಠ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲುಪ್ರಸಾದ್ ಯಾದವ್ ಮನವಿಯನ್ನು ತಿರಸ್ಕರಿಸಿರುವ ಜಾರ್ಖಂಡ್ ಹೈಕೋಟರ್್ ಆಗಸ್ಟ್ 30ಕ್ಕೆ ಶರಣಾಗುವಂತೆ ಶುಕ್ರವಾರ ಸೂಚಿಸಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಹೊರಗಿದ್ದ ಲಾಲುಪ್ರಸಾದ್ ತನ್ನ ಪೆರೋಲ್ ಅವಧಿ ಮುಂದುವರಿಸುವಂತೆ ಕೋರಿದ್ದರು. ಲಾಲು ಸದ್ಯ ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಳಿಕ ಅವರನ್ನು ಮುಂಬೈಯ ಏಷ್ಯನ್ ಹಾಟರ್್ ಇನ್ಸ್ ಟಿಟ್ಯೂಟ್ ಗೆ ದಾಖಲಿಸಲು ಕರೆತರಬೇಕಾಗಿದೆ ಎಂದು ಲಾಲು ಅವರ ವಕೀಲರು ತಿಳಿಸಿದ್ದಾರೆ.
ಮೇವು ಹಗರಣ ಪ್ರಕರಣದಲ್ಲಿ ದೋಷಿ ಎಂದು ಕೋಟರ್್ ತೀಪು ನೀಡಿತ್ತು. 2017ರ ಡಿಸೆಂಬರ್ 23ರಿಂದ ಲಾಲು ಜೈಲಿನಲ್ಲಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಟರ್್ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 